ಪ್ರಭುಲಿಂಗ ನಾವದಗಿ 
ರಾಜ್ಯ

ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ಕಾಂಗ್ರೆಸ್ ಗೆ ಬಹುಮತ ಸಿಗುತ್ತಿದ್ದಂತೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ. 

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ಕಾಂಗ್ರೆಸ್ ಗೆ ಬಹುಮತ ಸಿಗುತ್ತಿದ್ದಂತೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ. 

ಇಂದು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ನಾವದಗಿ ರಾಜೀನಾಮೆ ನೀಡಿದರು. 2018ರ ಮೇ 18ರಂದು ನಾವದಗಿ ಅವರು ರಾಜ್ಯದ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು. 

2018ಕ್ಕೂ ಮುನ್ನ ಮಧುಸೂದನ್ ನಾಯಕ್ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಅ ನಂತರ 2019ರಲ್ಲಿ ಜೆಡಿಎಸ್ ಕಾಂಗ್ರೆಸ್ ಸರ್ಕಾರದಲ್ಲಿ ಉದಯ್ ಹೊಳ್ಳ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಈ ಸಮಿಶ್ರ ಸರ್ಕಾರ ಪತನಗೊಂಡ ನಂತರ ಉದಯ್ ಹೊಳ್ಳ ರಾಜೀನಾಮೆ ನೀಡಿದ್ದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 135 ಸ್ಥಾನ ಗಳಿಸಿ ಭರ್ಜರಿ ಬಹುಮತ ಪಡೆದಿದೆ. ಬಿಜೆಪಿ 66 ಹಾಗೂ ಜೆಡಿಎಸ್ 19 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿವೆ. ಇತರರು ಮೂರು ಕಡೆ ಗೆಲುವು ಸಾಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Dasara Holidays extended: ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ರಜೆ; ಜಾತಿ ಗಣತಿ ಅವಧಿ ವಿಸ್ತರಣೆ!

ಡಿಕೆಶಿಯ 'ಸುರಂಗದ ಹುಚ್ಚಿ'ನಿಂದ ಲಾಲ್‌ಬಾಗ್ ಸಸ್ಯೋದ್ಯಾನಕ್ಕೆ ಅಪಾಯ- ಆರ್. ಅಶೋಕ್

ಕಳ್ಳಸಾಗಣೆದಾರರನ್ನು ಮಣಿಪುರದತ್ತ ಸೆಳೆಯುತ್ತಿರುವ ಮಾದಕ ದ್ರವ್ಯ ವ್ಯಾಪಾರ (ಜಾಗತಿಕ ಜಗಲಿ)

ನದಿಗೆ ಬಟ್ಟೆ ಹೊಗೆಯಲು ಹೋಗಿದ್ದ ಮಹಿಳೆಯನ್ನು ಎಳೆದೊಯ್ದ ಮೊಸಳೆ: ಭಯಭೀತರಾದ ಜನ, Video!

4 ಲಕ್ಷ ಮಹಿಳೆಯರ ಮೇಲೆ ಅತ್ಯಾಚಾರಕ್ಕೆ ಅನುಮತಿ ನೀಡಿದವರಿಂದ ಪಾಠದ ಅಗತ್ಯವಿಲ್ಲ: ವಿಶ್ವಸಂಸ್ಥೆಯಲ್ಲಿ ಪಾಕ್‌ ವಿರುದ್ಧ ಭಾರತ ಗುಡುಗು

SCROLL FOR NEXT