ಪ್ರಭುಲಿಂಗ ನಾವದಗಿ 
ರಾಜ್ಯ

ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ

ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ಕಾಂಗ್ರೆಸ್ ಗೆ ಬಹುಮತ ಸಿಗುತ್ತಿದ್ದಂತೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ. 

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ಕಾಂಗ್ರೆಸ್ ಗೆ ಬಹುಮತ ಸಿಗುತ್ತಿದ್ದಂತೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ. 

ಇಂದು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ನಾವದಗಿ ರಾಜೀನಾಮೆ ನೀಡಿದರು. 2018ರ ಮೇ 18ರಂದು ನಾವದಗಿ ಅವರು ರಾಜ್ಯದ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು. 

2018ಕ್ಕೂ ಮುನ್ನ ಮಧುಸೂದನ್ ನಾಯಕ್ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಅ ನಂತರ 2019ರಲ್ಲಿ ಜೆಡಿಎಸ್ ಕಾಂಗ್ರೆಸ್ ಸರ್ಕಾರದಲ್ಲಿ ಉದಯ್ ಹೊಳ್ಳ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಈ ಸಮಿಶ್ರ ಸರ್ಕಾರ ಪತನಗೊಂಡ ನಂತರ ಉದಯ್ ಹೊಳ್ಳ ರಾಜೀನಾಮೆ ನೀಡಿದ್ದರು.

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 135 ಸ್ಥಾನ ಗಳಿಸಿ ಭರ್ಜರಿ ಬಹುಮತ ಪಡೆದಿದೆ. ಬಿಜೆಪಿ 66 ಹಾಗೂ ಜೆಡಿಎಸ್ 19 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿವೆ. ಇತರರು ಮೂರು ಕಡೆ ಗೆಲುವು ಸಾಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ