ಸಾಂದರ್ಭಿಕ ಚಿತ್ರ 
ರಾಜ್ಯ

ಹರಿಹರ: ಆಸ್ತಿ ವಿವಾದ, ಅಣ್ಣನನ್ನೇ ಚಾಕುವಿನಿಂದ ಇರಿದು ಕೊಂದ ತಮ್ಮ!

ಆಸ್ತಿ ವಿವಾದದಿಂದ ತಮ್ಮನೇ ಅಣ್ಣನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಹರಿಹರದಲ್ಲಿ ನಡೆದಿದೆ. ಪ್ರಶಾಂತ್ ನಗರದ ನಿವಾಸಿ ಕೆ.ಜಿ ಕುಮಾರ ಕೊಲೆಯಾದ ವ್ಯಕ್ತಿ. 

ಹರಿಹರ: ಆಸ್ತಿ ವಿವಾದದಿಂದ ತಮ್ಮನೇ ಅಣ್ಣನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಹರಿಹರದಲ್ಲಿ ನಡೆದಿದೆ. ಪ್ರಶಾಂತ್ ನಗರದ ನಿವಾಸಿ ಕೆ.ಜಿ ಕುಮಾರ ಕೊಲೆಯಾದ ವ್ಯಕ್ತಿ. 

ಹರಿಹರದ ಗುಂಡಪ್ಪ ಎಂಬುವರಿಗೆ ಇಬ್ಬರು ಪತ್ನಿಯರಿದ್ದು, ಎರಡನೇ ಪತ್ನಿ ರತ್ನಮ್ಮನ ಪುತ್ರ ರಾಜು ಹಾಗೂ ಮೊದಲನೇ ಪತ್ನಿ ಲಕ್ಷಮ್ಮ ಕೊನೆಯ ಮಗನಾದ ಕುಮಾರ್ ಕೆ.ಜಿ ಅವರೊಂದಿಗೆ ಆಸ್ತಿ ವಿಚಾರದಲ್ಲಿ ನ್ಯಾಯಾಲಯದಲ್ಲಿ ದಾವೆ ನಡೆಯುತ್ತಿತ್ತು. ಇವರಿಬ್ಬರ ಮಧ್ಯೆ ಮನಸ್ತಾಪವಿದ್ದು ಪದೇಪದೇ ಸಣ್ಣಪುಟ್ಟ ಜಗಳ ನಡೆಯುತಿತ್ತು ಎನ್ನಲಾಗಿದೆ.

ನಿನ್ನೆ ರಾತ್ರಿ ದಾವಣಗೆರೆಯಿಂದ ಹರಿಹರಕ್ಕೆ ವಾಪಸ್ ಬರುತ್ತಿರುವ ಮಾರ್ಗ ಮಧ್ಯೆ ಕುಮಾರ್ ಮೇಲೆ ತಮ್ಮ ರಾಜು ಮತ್ತು ಮಾರುತಿ ಎಂಬುವವರು ಹಲ್ಲೆ ಮಾಡಿದ್ದಾರೆ. ಕೂಡಲೇ ಕುಮಾರ್ ನನ್ನು ಹರಿಹರ ಆಸ್ಪತ್ರೆಗೆ ದಾಖಲಿಸಲಾಯಿತು.

ಈ ವೇಳೆ ಆಸ್ಪತ್ರೆಯಲ್ಲಿಯೇ ಕುಮಾರ್ ಮೇಲೆ ರಾಜು ಚಾಕುವಿನಿಂದ ತಿವಿದಿದ್ದಾರೆ. ತೀವ್ರವಾಗಿ ರಕ್ತಸಾವ್ರಗೊಂಡ ಕುಮಾರ್ ಅವರನ್ನು ದಾವಣಗೆರೆಗೆ ಕರೆತರುವಾಗ ಮಾರ್ಗಮಧ್ಯದಲ್ಲಿ ಕುಮಾರ್ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕುಮಾರ್ ಪತ್ನಿ ರೇಖಾ ಹರಿಹರ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೂಡಲೇ ರಾಜು ಹಾಗೂ ಮಾರುತಿಯವರನ್ನು ಪೋಲೀಸರು ಬಂಧಿಸಿದ್ದಾರೆ. ಘಟನಾಸ್ಥಳಕ್ಕೆ ಪೊಲೀಸ್ ಸಿಬ್ಬಂದಿಗಳು ಆಗಮಿಸಿ ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT