ಸಂಗ್ರಹ ಚಿತ್ರ 
ರಾಜ್ಯ

ಕಾಂಗ್ರೆಸ್ ಶಾಸಕ ನಾಗೇಂದ್ರ ಮೇಲೆ ಹಲ್ಲೆಗೆ ಯತ್ನ: ಇಬ್ಬರ ಬಂಧನ

ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಬಿ. ನಾಗೇಂದ್ರ ಅವರಿಗೆ ಕಿಡಿಗೇಡಿಗಳಿಬ್ಬರು ಕತ್ತಿ ತೋರಿಸಿ ಬೆದರಿಕೆ ಹಾಕಿದರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ.

ಬಳ್ಳಾರಿ: ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಬಿ. ನಾಗೇಂದ್ರ ಅವರಿಗೆ ಕಿಡಿಗೇಡಿಗಳಿಬ್ಬರು ಕತ್ತಿ ತೋರಿಸಿ ಬೆದರಿಕೆ ಹಾಕಿದರೆನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ.

ಕರ್ನಾಟಕ ವಿಧಾನಸಭಾ ಚುಣಾವಣಾ ಫಲಿತಾಂಶ ಹೊರ ಬಿದ್ದ ಶನಿವಾರ ರಾತ್ರಿ 8 ಗಂಟೆಯ ಸಮಯದಲ್ಲಿ ಶಾಸಕ ನಾಗೇಂದ್ರ ಆಪ್ತರೊಬ್ಬರ ಮನೆಗೆ ಹೋಗಿ ವಾಪಸ್‌ ಬರುವ ಸಂದರ್ಭ ರಸ್ತೆ ಬದಿಯಲ್ಲಿದ್ದ ಇಬ್ಬರು ಕೈಯಲ್ಲಿದ್ದ ಕತ್ತಿ ಝಳಪಿಸಿ ಬೆದರಿಕೆ ಹಾಕಿದ್ದಾರೆಂದು ಹೇಳಲಾಗುತ್ತಿತ್ತು. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಾಗೇಂದ್ರ ಬೆಂಬಲಿಗರು ಹಾಗೂ ಕಾಂಗ್ರೆಸ್'ನ ಹಿರಿಯ ಮುಖಂಡರು ಘಟನೆಯನ್ನು ಖಂಡಿಸಿತ್ತು. ಅಲ್ಲದೆ. ಹೊಸದಾಗಿ ಆಯ್ಕೆಯಾದ ಎಲ್ಲಾ ಕಾಂಗ್ರೆಸ್ ಶಾಸಕರಿಗೆ ಹೆಚ್ಚಿನ ಭದ್ರತೆ ಒದಗಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದರು.

ನಾಗೇಂದ್ರ ಅವರು ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಿರಿಯ ನಾಯಕ ಬಿ ಶ್ರೀರಾಮುಲು ಅವರನ್ನು ಸುಮಾರು 29,000 ಮತಗಳಿಂದ ಸೋಲಿಸಿದ್ದರು.

ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಬಳ್ಳಾರಿಗೆ ನಾಗೇಂದ್ರ ಅವರು ಆಗಮಿಸಿದ್ದರು. ಈ ವೇಳೆ ವೆಂಕಟೇಶ್ ರಾಮಾಂಜೆನೇಯಲು (27), ರಮೇಶ್ ಕೆ (31), ರಮ್ಯಾ (30) ಮತ್ತು ಹನುಮೇಶ್ (29) ಎಂಬ ನಾಲ್ವರು ನಾಗೇಂದ್ರ ಅವರ ಮೇಲೆ ಹಲ್ಲೆಗೆ ಯತ್ನಿಸಿದರು. ಈ ವೇಳೆ ನಾಗೇಂದ್ರ ಅವರ ಭದ್ರತಾಪಡೆಗಳು ರಮ್ಮಾ ಹಾಗೂ ವೆಂಕಟೇಶ್ ಅವರನ್ನು ಹಿಡಿದು, ಥಳಿಸಿ ಪೊಲೀಸರ ವಶಕ್ಕೆ ನೀಡಿದ್ದರು. ಆದರೆ, ಇನ್ನಿಬ್ಬರು ರಮೇಶ್ ಹಾಗೂ ಹನುಮೇಶ್ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಇದೀಗ ಇಬ್ಬರೂ ತಲೆಮರೆಸಿಕೊಂಡಿದ್ದು, ಇಬ್ಬರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಈ ಮಧ್ಯೆ, ತಲೆಮರೆಸಿಕೊಂಡಿರುವ ಇಬ್ಬರನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT