ಯಡಿಯೂರಪ್ಪ 
ರಾಜ್ಯ

ಯಡಿಯೂರಪ್ಪ ಕಣ್ಣೀರಿನಲ್ಲಿ ಬಿಜೆಪಿ ಕೊಚ್ಚಿ ಹೋಯಿತು: ದಿಂಗಾಲೇಶ್ವರ ಸ್ವಾಮಿ

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗಲಿದೆ ಎಂಬ ತಮ್ಮ ಭವಿಷ್ಯವಾಣಿ ಇದೀಗ ನಿಜವಾಗಿದೆ ಎಂದು ಶಿರಹಟ್ಟಿ ಫಕ್ಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮಿಗಳು ಸೋಮವಾರ ಹೇಳಿದ್ದಾರೆ.

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಕಣ್ಣೀರಿನಲ್ಲಿ ಬಿಜೆಪಿ ಸರ್ಕಾರ ಕೊಚ್ಚಿ ಹೋಗಲಿದೆ ಎಂಬ ತಮ್ಮ ಭವಿಷ್ಯವಾಣಿ ಇದೀಗ ನಿಜವಾಗಿದೆ ಎಂದು ಶಿರಹಟ್ಟಿ ಫಕ್ಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮಿಗಳು ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಕೆಎಸ್ ಈಶ್ವರಪ್ಪ ಸೇರಿದಂತೆ ಹಲವು ನಾಯಕರನ್ನು ನಿರ್ಲಕ್ಷಿಸಿದೆ. ಇದು ಪಕ್ಷದ ಇಂದಿನ ಪರಿಸ್ಥಿತಿಗೆ ಕಾರಣ ಎಂದು ಹೇಳಿದರು.

“ಎಲ್ಲರೂ ಯಡಿಯೂರಪ್ಪ ಅವರ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ ಮತ್ತು ಎಲ್ಲಾ ಸಮುದಾಯದ ಮುಖಂಡರು ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದು ಒತ್ತಾಯಿಸಿದ್ದರು. ಆದರೂ, ಅವರನ್ನು ಸಿಎಂ ಸ್ಥಾನದಿಂದ ಇಳಿಸಿ, ಕಣ್ಣೀರು ಹಾಕಿಸಿದ್ದರು. ಇದೀಗ ಬಿಜೆಪಿ ಸಂಕಷ್ಟಕ್ಕೆ ಸಿಲುಕಿದೆ ಎಂದು ತಿಳಿಸಿದರು.

ನಾನು ಹೇಳಿಕೆ ನೀಡಿದ್ದರ ಕುರಿತು ಬಿಜೆಪಿ ಗಂಭೀರವಾಗಿ ಚಿಂತನೆ ನಡೆಸಬೇಕಿತ್ತು. ಕೇಸರಿಪಡೆಯಾಗಿ ಅಧಿಕಾರಕ್ಕೆ ಬಂದ ಬಳಿಕ ಸ್ವಾಮೀಜಿಗಳಿಗೆ ಗೌರವ ನೀಡಲಿಲ್ಲ. ಕಮಿಷನ್ ಮತ್ತು ಇತರ ಭ್ರಷ್ಟಾಚಾರದ ಆರೋಪಗಳಲ್ಲಿ ತೊಡಗಿಕೊಂಡ ಬಳಿಕ ದುರಹಂಕಾರದಿಂದ ವರ್ತಿಸಿದ್ದರು ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT