ಪರಮೇಶ್ವರ್ 
ರಾಜ್ಯ

ವರಸೆ ಬದಲಿಸಿದ ಕಾಂಗ್ರೆಸ್: ಗ್ಯಾರಂಟಿಗಳ ಬಗ್ಗೆ ಹಿರಿಯ ನಾಯಕ ಪರಮೇಶ್ವರ್ ಹೇಳಿದ್ದೇನು?

ಚುನಾವಣೆಯಲ್ಲಿ ಗೆಲ್ಲುವ ಮುನ್ನ 5 ಉಚಿತ ಗ್ಯಾರೆಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್​, ಅಧಿಕಾರಕ್ಕೆ ಬರುತ್ತಿದ್ದಂತೆ ತನ್ನ ವರಸೆ ಬದಲಾಯಿಸಿದೆ.

ಬೆಂಗಳೂರು: ಚುನಾವಣೆಯಲ್ಲಿ ಗೆಲ್ಲುವ ಮುನ್ನ 5 ಉಚಿತ ಗ್ಯಾರೆಂಟಿಗಳನ್ನು ಘೋಷಣೆ ಮಾಡಿರುವ ಕಾಂಗ್ರೆಸ್​, ಅಧಿಕಾರಕ್ಕೆ ಬರುತ್ತಿದ್ದಂತೆ ತನ್ನ ವರಸೆ ಬದಲಾಯಿಸಿದೆ. ಕಾಂಗ್ರೆಸ್​ ಗ್ಯಾರೆಂಟಿಗಳಿಗೆ ಷರತ್ತು ವಿಧಿಸುವುದಾಗಿ ಜಿ. ಪರಮೇಶ್ವರ್​ ಹೇಳಿದ್ದಾರೆ. ಈ ಹಿಂದೆ ಷರತ್ತಿನ ಬಗ್ಗೆ ತಿಳಿಸದೇ ಎಲ್ಲರಿಗೂ ಉಚಿತ ಎಂದು ಕಾಂಗ್ರೆಸ್​ ಹೇಳಿತ್ತು.

ಸುದ್ದಿಗಾರರೊಂದಿಗೆ ಮಾತನಾಡಿದ ಜಿ. ಪರಮೇಶ್ವರ್​, ಕಾಂಗ್ರೆಸ್ ಗ್ಯಾರಂಟಿಗಳಿಗೆ ಕಂಡಿಷನ್ಸ್ ಇರುತ್ತದೆ. ಮೊದಲ ಕ್ಯಾಬಿನೆಟ್​ನಲ್ಲೇ 5 ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ಧರಾಗಿ ಇರುತ್ತೇವೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಷರತ್ತುಗಳು ಇರಲಿವೆ ಎಂದು ಹಿರಿಯ ನಾಯಕ ಪರಮೇಶ್ವರ್‌  ಹೇಳಿದ್ದಾರೆ.

ಗ್ರಾಮೀಣ ಭಾಗದ ಜನರು ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ವಿದ್ಯುತ್‌ ಶುಲ್ಕ ಪಾವತಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೊದಲ ಕ್ಯಾಬಿನೆಟ್‌ನಲ್ಲಿ 5 ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ದರಾಗಿ ಇದ್ದು ಮೊದಲ ಕ್ಯಾಬಿನೆಟ್‌ನಲ್ಲಿ ಜಾರಿ ಮಾಡುತ್ತೇವೆ ಎಂದು ತಿಳಿಸಿದರು.

ಆಯಾ ಇಲಾಖೆಯ ಸಚಿವರು ಕೂತು ಗ್ಯಾರಂಟಿ ಜಾರಿ ಮಾಡುವ ಬಗ್ಗೆ ಕೆಲಸ ಮಾಡುತ್ತೇವೆ. ಹಾಗೆಯೇ ನೀಡಿದರೆ ಸುಮ್ಮನೆ ಎಲ್ಲರೂ ತೆಗೆದುಕೊಳ್ಳುತ್ತಾರೆ. ಗ್ಯಾರಂಟಿಗಳಿಗೆ ಮಾನದಂಡ ನಿಗದಿ ಮಾಡಲಾಗುವುದು ಎಂದು ವಿವರಿಸಿದರು.  

ಸಿಎಂ ಆಯ್ಕೆ ವಿಚಾರವಾಗಿ ಮಾತನಾಡಿ, ಎಲ್ಲವು ಸುಸೂತ್ರವಾಗಿ ನಡೆಯುತ್ತದೆ. ಹೈಕಮಾಂಡ್ ಪ್ರಕ್ರಿಯೆ ನಡೆಸುತ್ತಿದೆ. ಈಗಾಗಲೇ ಶಾಸಕರ ಅಭಿಪ್ರಾಯ ಪಡೆದಿದ್ದಾರೆ. ದೆಹಲಿಯಲ್ಲಿ ಸೋನಿಯಾ, ರಾಹುಲ್ ಹಾಗೂ ಅಧ್ಯಕ್ಷರಾದ ಖರ್ಗೆ ಅವರು ಕೂತು ಚರ್ಚೆ ಮಾಡಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT