ಸವದಿ ಅಭಿಮಾನಿಗಳ ಸಂಭ್ರಮ 
ರಾಜ್ಯ

ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿಗೆ ಕಂಬಳಿ ಉಡುಗೊರೆ ನೀಡಿದ ಸವದಿ ಬೆಂಬಲಿಗರು!

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡ ನಂತರ ಅವರ ಅಭಿಮಾನಿಗಳ ವಿಜಯೋತ್ಸವ ಆಚರಿಸಿದರು.

ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡ ನಂತರ ಅವರ ಅಭಿಮಾನಿಗಳ ವಿಜಯೋತ್ಸವ ಆಚರಿಸಿದರು.

ಅಥಣಿಯ ಕಕಮರಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ರಮೇಶ ಜಾರಕಿಹೊಳಿ ಹಾಗೂ ಮಾಜಿ ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಉಡುಗೊರೆಯಾಗಿ ತೋರಿಸಿ ಮುಂದಿನ ಐದು ವರ್ಷ ತಮ್ಮ ಮನೆಯಲ್ಲೇ ಮಲಗುವಂತೆ ಕಂಬಳಿ ತೋರಿಸಿ ಸಂಭ್ರಮಿಸಿದರು.

ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಎದುರಾಳಿಗಳ ಹಲವಾರು ಅಡೆತಡೆಗಳ ನಡುವೆಯೂ ಗೆಲುವು ಸಾಧಿಸಿದ ಸವದಿ ಪರ ಘೋಷಣೆಗಳನ್ನು ಕೂಗಿದರು. ಮುಖಂಡರಾದ ಪ್ರದೀಪ ಕರಡಿ ಮಾತನಾಡಿ, ‘ಈ ಬಾರಿಯ ಚುನಾವಣೆಯಲ್ಲಿ ಸವದಿ ಅವರನ್ನು ಸೋಲಿಸಿ ಮುಂದಿನ ಐದು ವರ್ಷ ನಿದ್ದೆಗೆಡಿಸುವುದಾಗಿ ಹೇಳಿದ್ದ ಜಾರಕಿಹೊಳಿ ಹಾಗೂ ಕುಮಠಳ್ಳಿ ಅವರಿಗೆ ಈ ಕಂಬಳಿಗಳನ್ನು ಉಡುಗೊರೆಯಾಗಿ ನೀಡುತ್ತಿದ್ದೇವೆ, ಇದು ನಮ್ಮ ಉತ್ತರ ಅವರಿಗೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಮಹಾದೇವ ಆಲಬಾಳ್, ಜಿನ್ನು ದುರ್ಗಣ್ಣನವರ್, ಜಯಣ್ಣ ಪೂಜಾರಿ, ರಮೇಶ ವಡೆಯರ್, ಭೀಮಣ್ಣ ಜನಗೌಡ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT