ಸಿಎಂ ಬೊಮ್ಮಾಯಿ 
ರಾಜ್ಯ

ಚುನಾವಣೆಯಲ್ಲಿ ಸೋಲು: ಪರಾಮರ್ಶೆ ಆರಂಭಿಸಿದ ಬಿಜೆಪಿ, ಸೋತ ಅಭ್ಯರ್ಥಿಗಳ ಭೇಟಿ ಮಾಡಿದ ಹಂಗಾಮಿ ಸಿಎಂ ಬೊಮ್ಮಾಯಿ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದ್ದು, ಕಳಪೆ ಪ್ರದರ್ಶನಕ್ಕೆ ಕಾರಣಗಳ ಕುರಿತು ಬಿಜೆಪಿ ಪರಾಮರ್ಶೆಯನ್ನು ಆರಂಭಿಸಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿದ್ದು, ಕಳಪೆ ಪ್ರದರ್ಶನಕ್ಕೆ ಕಾರಣಗಳ ಕುರಿತು ಬಿಜೆಪಿ ಪರಾಮರ್ಶೆಯನ್ನು ಆರಂಭಿಸಿದೆ.

ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿ ಅಭ್ಯರ್ಥಿಗಳನ್ನು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಗಳವಾರ ಭೇಟಿ ಮಾಡಿದರು.

ಆರೋಗ್ಯ ಸಚಿವರಾಗಿದ್ದ ಸುಧಾಕರ್ ಅವರು ಚಿಕ್ಕಬಳ್ಳಾಪುರದಲ್ಲಿ ಸೋಲು ಕಂಡಿದ್ದು, ಸುಧಾಕರ್ ಅವರನ್ನು ನಿನ್ನೆ ಬೆಳಿಗ್ಗೆ ಭೇಟಿ ಮಾಡಿದ ಬೊಮ್ಮಾಯಿಯವರು, ಮಾತುಕತೆ ನಡೆಸಿದರು.

ಬಳಿಕ ವರುಣಾ ಹಾಗೂ ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದ ಮಾಜಿ ವಸತಿ ಸಚಿವ ವಿ.ಸೋಮಣ್ಣ ಅವರನ್ನೂ ಬೊಮ್ಮಾಯಿಯವರು ಭೇಟಿ ಮಾಡಿದರು.

ಸೋಮಣ್ಣ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿಯವರು, ರಾಜಕೀಯಲ್ಲಿ ಸೋಮಣ್ಣ ಅವರು ಪುಟಿದೇಳುತ್ತಾರೆ. ಮುಂದಿನ ದಿನಗಳಲ್ಲಿ ಸೋಮಣ್ಣ ಅವರಿಗೆ ಒಳ್ಳೆಯ ಅವಕಾಶ ಸಿಗಲಿದೆ. ಈ ಕಷ್ಟದ ದಿನಗಳಲ್ಲಿ ನಾವು ಅವರ ಬೆಂಬಲಕ್ಕೆ ನಿಲ್ಲುತ್ತೇವೆ. ಸೋಮಣ್ಣ ಹಿರಿಯ ನಾಯಕರಾಗಿದ್ದು, 40 ವರ್ಷಗಳಿಂದ ಜನರ ಸೇವೆ ಮಾಡಿದ್ದಾರೆ. ವಸತಿ ಸಚಿವರಾಗಿ ಬೆಂಗಳೂರಿಗೆ ಅವರ ಕೊಡುಗೆ ಅಪಾರ. ಗೋವಿಂದರಾಜನಗರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸಿದರು ಎಂದು ಹೇಳಿದರು. ಅಲ್ಲದೆ, 2-3 ದಿನಗಳಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗುವುದು ಎಂದೂ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT