ಸತೀಶ್ ಜಾರಕಿ ಹೊಳಿ 
ರಾಜ್ಯ

ಸಿದ್ದರಾಮಯ್ಯ ಅವರಿಗೆ ಆಡಳಿತದ ಅನುಭವ ಹೆಚ್ಚು: ಸತೀಶ್ ಜಾರಕಿಹೊಳಿ

ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರು ಬಹುತೇಕ ಅಂತಿಮವಾಗುತ್ತಿದ್ದಂತೆಯೇ, ಅವರಿಗೆ ಸತೀಶ್ ಜಾರಕಿಹೊಳಿ ಪರೋಕ್ಷ ಬೆಂಬಲ ಸೂಚಿಸಿದ್ದಾರೆ.

ಬೆಂಗಳೂರು: ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರು ಬಹುತೇಕ ಅಂತಿಮವಾಗುತ್ತಿದ್ದಂತೆಯೇ, ಅವರಿಗೆ ಸತೀಶ್ ಜಾರಕಿಹೊಳಿ ಪರೋಕ್ಷ ಬೆಂಬಲ ಸೂಚಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ ಅವರಿಗೆ ಆಡಳಿತ ಅನುಭವ ಇದೆ. ಕಳೆದ ಬಾರಿಯಂತೆ ಈ ಬಾರಿಯೂ ಸರಾಗವಾಗಿ ಆಡಳಿತ ನಡೆಯಲಿದೆ. ಅವರ ಕಾರ್ಯಕ್ರಮ ಕಾರ್ಯವೈಖರಿಯೇ ಮತ್ತೆ ರಿಪೀಟ್ ಆಗಲಿದೆ ಎಂದರು.

ಅಂತೆಯೇ ಜನರಿಗೂ ಪಕ್ಷಕ್ಕೆ ಅನುಕೂಲ ಆಗುವ ವಿಶ್ವಾಸವಿದೆ. ಸೀಕ್ರೆಟ್ ಬ್ಯಾಲೆಟ್ ಮಾನದಂಡದ ಮೇಲೆ ಸಿದ್ದರಾಮಯ್ಯ ಆಯ್ಕೆ ನಡೆದಿದೆ. ಡಿಕೆ ಶಿವಕುಮಾರ್ ಡಿಸಿಎಂ ಆಗಬಹುದೂ ಅಥವಾ ಇಲ್ಲದೇ ಇರಬಹುದು. ನಾವೆಲ್ಲ ಅಧಿಕಾರ ಇರಲಿ ಇಲ್ಲದೇ ಇರಲಿ ಪಕ್ಷಕ್ಕಾಗಿ ದುಡಿಯುತ್ತೇವೆ. ಅಂತೆಯೇ  ಲೋಕಸಭೆ ಚುನಾವಣೆ ಕೂಡ ಮಾಡ್ತೇವೆ ಎಂದರು.

ಡಿಸಿಎಂ ಹುದ್ದೆಗೆ ಸತೀಶ್ ಪಟ್ಟು
ಇದೇ ವೇಳೆ ನಾನೂ ಕೂಡ ಡಿಸಿಎಂ ಸ್ಥಾನಕ್ಕಾಗಿ ಒತ್ತಾಯಿಸುತ್ತೇನೆ ಎಂದ ಸತೀಶ್ ಜಾರಕಿಹೊಳಿ, ಬೇರೆ ಸಮುದಾಯಕ್ಕೆ ಡಿಸಿಎಂ ಹುದ್ದೆ ಕೊಟ್ಟರೆ ನಾನು ಕೂಡ ಪಕ್ಷವನ್ನು ಕೇಳುತ್ತೇನೆ. ವೈಯಕ್ತಿಕವಾಗಿ ಡಿಸಿಎಂ ಬೇಡ, ಸಚಿವನಾಗಿಯೇ ಇರ್ತೀನಿ. ಡಿಕೆ ಶಿವಕುಮಾರ್ ಕೆಲಸ ಕೊಡುಗೆ ಬಹಳ ಇದೆ. ಅವರ ಮಧ್ಯೆ ಸಮಾಧಾನಕರ ರೀತಿಯಲ್ಲೇ ಸಂಧಾನ ಆಗಿದೆ. ಒಬ್ಬರೇ ಸಿಎಂ-ಡಿಸಿಎಂ ಇದ್ದರೆ ಒಳ್ಳೆಯದು ಎಂದು ಸತೀಶ್ ಹೇಳಿದರು.

ಇನ್ನು ಮೂಲಗಳ ಪ್ರಕಾರ ನಾಳೆ ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಇದಕ್ಕಾಗಿ ಭರದ ಸಿದ್ಧತೆಗಳು ನಡೆಯುತ್ತಿವೆ. ಅಧಿಕಾರಿಗಳು, ಪೊಲೀಸರು ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT