ಸತೀಶ್ ಜಾರಕಿ ಹೊಳಿ 
ರಾಜ್ಯ

ಸಿದ್ದರಾಮಯ್ಯ ಅವರಿಗೆ ಆಡಳಿತದ ಅನುಭವ ಹೆಚ್ಚು: ಸತೀಶ್ ಜಾರಕಿಹೊಳಿ

ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರು ಬಹುತೇಕ ಅಂತಿಮವಾಗುತ್ತಿದ್ದಂತೆಯೇ, ಅವರಿಗೆ ಸತೀಶ್ ಜಾರಕಿಹೊಳಿ ಪರೋಕ್ಷ ಬೆಂಬಲ ಸೂಚಿಸಿದ್ದಾರೆ.

ಬೆಂಗಳೂರು: ಕರ್ನಾಟಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರ ಹೆಸರು ಬಹುತೇಕ ಅಂತಿಮವಾಗುತ್ತಿದ್ದಂತೆಯೇ, ಅವರಿಗೆ ಸತೀಶ್ ಜಾರಕಿಹೊಳಿ ಪರೋಕ್ಷ ಬೆಂಬಲ ಸೂಚಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ ಅವರಿಗೆ ಆಡಳಿತ ಅನುಭವ ಇದೆ. ಕಳೆದ ಬಾರಿಯಂತೆ ಈ ಬಾರಿಯೂ ಸರಾಗವಾಗಿ ಆಡಳಿತ ನಡೆಯಲಿದೆ. ಅವರ ಕಾರ್ಯಕ್ರಮ ಕಾರ್ಯವೈಖರಿಯೇ ಮತ್ತೆ ರಿಪೀಟ್ ಆಗಲಿದೆ ಎಂದರು.

ಅಂತೆಯೇ ಜನರಿಗೂ ಪಕ್ಷಕ್ಕೆ ಅನುಕೂಲ ಆಗುವ ವಿಶ್ವಾಸವಿದೆ. ಸೀಕ್ರೆಟ್ ಬ್ಯಾಲೆಟ್ ಮಾನದಂಡದ ಮೇಲೆ ಸಿದ್ದರಾಮಯ್ಯ ಆಯ್ಕೆ ನಡೆದಿದೆ. ಡಿಕೆ ಶಿವಕುಮಾರ್ ಡಿಸಿಎಂ ಆಗಬಹುದೂ ಅಥವಾ ಇಲ್ಲದೇ ಇರಬಹುದು. ನಾವೆಲ್ಲ ಅಧಿಕಾರ ಇರಲಿ ಇಲ್ಲದೇ ಇರಲಿ ಪಕ್ಷಕ್ಕಾಗಿ ದುಡಿಯುತ್ತೇವೆ. ಅಂತೆಯೇ  ಲೋಕಸಭೆ ಚುನಾವಣೆ ಕೂಡ ಮಾಡ್ತೇವೆ ಎಂದರು.

ಡಿಸಿಎಂ ಹುದ್ದೆಗೆ ಸತೀಶ್ ಪಟ್ಟು
ಇದೇ ವೇಳೆ ನಾನೂ ಕೂಡ ಡಿಸಿಎಂ ಸ್ಥಾನಕ್ಕಾಗಿ ಒತ್ತಾಯಿಸುತ್ತೇನೆ ಎಂದ ಸತೀಶ್ ಜಾರಕಿಹೊಳಿ, ಬೇರೆ ಸಮುದಾಯಕ್ಕೆ ಡಿಸಿಎಂ ಹುದ್ದೆ ಕೊಟ್ಟರೆ ನಾನು ಕೂಡ ಪಕ್ಷವನ್ನು ಕೇಳುತ್ತೇನೆ. ವೈಯಕ್ತಿಕವಾಗಿ ಡಿಸಿಎಂ ಬೇಡ, ಸಚಿವನಾಗಿಯೇ ಇರ್ತೀನಿ. ಡಿಕೆ ಶಿವಕುಮಾರ್ ಕೆಲಸ ಕೊಡುಗೆ ಬಹಳ ಇದೆ. ಅವರ ಮಧ್ಯೆ ಸಮಾಧಾನಕರ ರೀತಿಯಲ್ಲೇ ಸಂಧಾನ ಆಗಿದೆ. ಒಬ್ಬರೇ ಸಿಎಂ-ಡಿಸಿಎಂ ಇದ್ದರೆ ಒಳ್ಳೆಯದು ಎಂದು ಸತೀಶ್ ಹೇಳಿದರು.

ಇನ್ನು ಮೂಲಗಳ ಪ್ರಕಾರ ನಾಳೆ ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಇದಕ್ಕಾಗಿ ಭರದ ಸಿದ್ಧತೆಗಳು ನಡೆಯುತ್ತಿವೆ. ಅಧಿಕಾರಿಗಳು, ಪೊಲೀಸರು ಕಂಠೀರವ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT