ಪುಷ್ಪ ಅಮರನಾಥ್-ಅಶೋಕ್ ಪಟ್ಟಣ್ 
ರಾಜ್ಯ

ಸಿಎಂ ಘೋಷಣೆ ಕಗ್ಗಂಟು: ಸಿದ್ದರಾಮಯ್ಯ ಸಿಎಂ‌ ಎಂದು ಘೋಷಿಸಿದ ಪುಷ್ಪಾ ಅಮರನಾಥ್‌, ಅಶೋಕ್‌ ಪಟ್ಟಣ್‌ಗೆ ನೋಟಿಸ್?

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್‌ ಮಟ್ಟದಲ್ಲಿ ಇನ್ನೂ ತೀವ್ರ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಹೈಕಮಾಂಡ್‌ ಘೋಷಣೆ ಮಾಡಿದೆ.

ನವದೆಹಲಿ: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್‌ ಮಟ್ಟದಲ್ಲಿ ಇನ್ನೂ ತೀವ್ರ ಚರ್ಚೆ ನಡೆಯುತ್ತಿರುವ ಮಧ್ಯೆಯೇ ಸಿದ್ದರಾಮಯ್ಯ ಅವರನ್ನು ಸಿಎಂ ಎಂದು ಹೈಕಮಾಂಡ್‌ ಘೋಷಣೆ ಮಾಡಿದೆ ಎಂಬ ಸುಳ್ಳು ಸುದ್ದಿ ಹರಿಬಿಟ್ಟ ಇಬ್ಬರು ಕಾಂಗ್ರೆಸ್‌ ನಾಯಕರಿಗೆ ನೋಟಿಸ್‌ ನೀಡುವ ಎಚ್ಚರಿಕೆ ನೀಡಲಾಗಿದೆ.

ರಾಮದುರ್ಗ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಅಶೋಕ್‌ ಎಂ. ಪಟ್ಟಣ್‌, ರಾಜ್ಯ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಅವರಿಗೆ ನೋಟಿಸ್‌ ನೀಡುವಂತೆ ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಸೂಚನೆ ನೀಡಿದ್ದಾರೆ.

ಕರ್ನಾಟಕ ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ.. 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ ಹೊರಡಿಸುತ್ತೇವೆ ಎಂದು  ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮವಾಗಿಲ್ಲ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು. ನಾಳೆ ಅಥವಾ ನಾಡಿದ್ದು ನೂತನ ಸಿಎಂ ಘೋಷಣೆ ಸಾಧ್ಯತೆ ಇದೆ ಎಂದು ಹೇಳಿದರು.

ಸದ್ಯ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸಮಾಲೋಚನೆ ನಡೆಯುತ್ತಿದೆ. ಕಾಂಗ್ರೆಸ್ ನಿರ್ಧಾರ ಕೈಗೊಂಡಾಗ ನಾವು ನಿಮಗೆ ತಿಳಿಸುತ್ತೇವೆ. ಮುಂದಿನ 48-72 ಗಂಟೆಗಳಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಲಿದೆ ಎಂದು ಸುರ್ಜೇವಾಲಾ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT