ಸಾಂದರ್ಭಿಕ ಚಿತ್ರ 
ರಾಜ್ಯ

ರೈತರ ಕಲ್ಯಾಣಕ್ಕಾಗಿ ರಸಗೊಬ್ಬರ ಸಹಾಯಧನ 1.08 ಲಕ್ಷ ಕೋಟಿಗೆ ಏರಿಕೆ- ಸಂಸದ ಈರಣ್ಣ ಕಡಾಡಿ

ರೈತರ ಕಲ್ಯಾಣಕ್ಕಾಗಿ ರಸಗೊಬ್ಬರಕ್ಕೆ ಹೆಚ್ಚುವರಿಯಾಗಿ 38 ಸಾವಿರ ಕೋಟಿ ರೂ. ಸಹಾಯಧನ ನೀಡಲು ಕೇಂದ್ರ ಸಚಿವ ಸಂಪುಟದಲ್ಲಿ ನಿರ್ಧರಿಸಿದೆ.

ಬೆಂಗಳೂರು: ರೈತರ ಕಲ್ಯಾಣಕ್ಕಾಗಿ ರಸಗೊಬ್ಬರಕ್ಕೆ ಹೆಚ್ಚುವರಿಯಾಗಿ 38 ಸಾವಿರ ಕೋಟಿ ರೂ. ಸಹಾಯಧನ ನೀಡಲು ಕೇಂದ್ರ ಸಚಿವ ಸಂಪುಟದಲ್ಲಿ ನಿರ್ಧರಿಸಿದೆ. ಇದರಿಂದ 2023-24ನೇ ಸಾಲಿನಲ್ಲಿ ರಸಗೊಬ್ಬರದ ಸಹಾಯಧನ ಒಟ್ಟು 1.08 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಈ ಸಹಾಯಧನದಿಂದ 12 ಕೋಟಿ ರೈತರು ಪ್ರಯೋಜನೆ ಪಡೆದುಕೊಳ್ಳಲಿದ್ದಾರೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದ್ದಾರೆ.

 ಕೇಂದ್ರ ಸರ್ಕಾರ ಯೂರಿಯಾ ರಸಗೊಬ್ಬರ ಸಹಾಯಧನಕ್ಕಾಗಿ 2023-24ರ ಬಜೆಟ್‍ನಲ್ಲಿ 70 ಸಾವಿರ ಕೋಟಿ ರೂ. ಘೋಷಣೆ ಮಾಡಿದೆ. ಇದೀಗ ಹೆಚ್ಚುವರಿಯಾಗಿ 38 ಸಾವಿರ ಕೋಟಿ ರೂ. ಸಹಾಯಧನ ಘೋಷಣೆ ಮಾಡಿದೆ. ಅಲ್ಲದೇ ಪ್ರಸ್ತುತ ಯೂರಿಯಾ ಬೆಲೆ ಪ್ರತಿ ಬ್ಯಾಗ್‍ಗೆ 276 ಹಾಗೂ ಡಿಎಪಿಗೆ 1350 ರೂ. ಇದ್ದು, ಈ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗುವುದಿಲ್ಲ ಮತ್ತು ನೈಟ್ರೋಜನ್‍ಗೆ ಪ್ರತಿ ಕೆಜಿಗೆ 76 ರೂ, ಫಾಸ್ಪೇಟ್‍ಗೆ 41 ರೂ, ಪೊಟಾಶ್ಗೆ 15 ರೂ, ಸಲ್ಫರ್ ಗೆ 2.8 ರೂ. ಸಹಾಯಧನ ನೀಡಲಾಗುತ್ತಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರದ ‘ಒಂದು ದೇಶ ಒಂದು ಗೊಬ್ಬರ’ ಯೋಜನೆಯಡಿ ಭಾರತವು ರಸಗೊಬ್ಬರ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುತ್ತಿದೆ. ರೈತರಿಗೆ ಅಗ್ಗದ ಮತ್ತು ಗುಣಮಟ್ಟದ ಪೋಷಕಾಂಶಗಳ ಯೂರಿಯಾ ಉತ್ಪಾದನೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿದೆ. ದೇಶದ ಬೆನ್ನೆಲುಬಾಗಿರುವ ರೈತರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT