ಎಚ್.ಡಿ ದೇವೇಗೌಡ 
ರಾಜ್ಯ

ಫಲಿತಾಂಶದಿಂದ ಹತಾಶರಾಗಬೇಡಿ: ಪಂಚಾಯತ್ ಚುನಾವಣೆಗೆ ಸಿದ್ದರಾಗಿ; ಜೆಡಿಎಸ್ ಕಾರ್ಯಕರ್ತರಿಗೆ ದೇವೇಗೌಡರ ಪತ್ರ!

ವಿಧಾನಸಭಾ ಚುನಾವಣಾ ಫಲಿತಾಂಶದಿಂದ ಹತಾಶರಾಗಬೇಡಿ ಎಂದು ಜನತಾ ದಳ (ಜಾತ್ಯತೀತ) ವರಿಷ್ಠ ಎಚ್‌ಡಿ ದೇವೇಗೌಡರು ತಮ್ಮ ಪಕ್ಷದ ಅಭ್ಯರ್ಥಿಗಳು ಮತ್ತು ಇತರ ಪದಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶದಿಂದ ಹತಾಶರಾಗಬೇಡಿ ಎಂದು ಜನತಾ ದಳ (ಜಾತ್ಯತೀತ) ವರಿಷ್ಠ ಎಚ್‌ಡಿ ದೇವೇಗೌಡರು ತಮ್ಮ ಪಕ್ಷದ ಅಭ್ಯರ್ಥಿಗಳು ಮತ್ತು ಇತರ ಪದಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ಪಕ್ಷದ ಅಭ್ಯರ್ಥಿಗಳು ಮತ್ತು ಪದಾಧಿಕಾರಿಗಳಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ, ಫಲಿತಾಂಶದಿಂದ ಅವರೆಲ್ಲರಿಗೂ ಅಚ್ಚರಿ ಮತ್ತು ನಿರಾಶೆಯಾಗಿದೆ ಎಂದು ಹೇಳಿದ್ದಾರೆ. ಚುನಾವಣಾ ಫಲಿತಾಂಶ ಮತ್ತು ಪಕ್ಷವನ್ನು ಬಲಪಡಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಶಾಸಕಾಂಗ ಪಕ್ಷದ ನಾಯಕರಿಗೆ ಸಭೆ ಕರೆಯುವಂತೆ ತಿಳಿಸಿದ್ದೇನೆ ಎಂದು ಗೌಡರು ಹೇಳಿದ್ದಾರೆ.

ಜೆಡಿಎಸ್ ಚುನಾವಣೆಯಲ್ಲಿ ಸೋತಿದ್ದರೂ ನಂತರ ಪುಟಿದೆದ್ದ ಹಿಂದಿನ ಉದಾಹರಣೆಗಳನ್ನು ಅವರು ಉಲ್ಲೇಖಿಸಿದ್ದಾರೆ ಮತ್ತು ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗುವಂತೆ ಪ್ರೋತ್ಸಾಹಿಸಿದ್ದಾರೆ. ಏತನ್ಮಧ್ಯೆ, ಗುರುವಾರ ಗೌಡರ 91 ನೇ ಹುಟ್ಟುಹಬ್ಬವಿದ್ದು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT