ಎಚ್.ಡಿ ದೇವೇಗೌಡ 
ರಾಜ್ಯ

ಫಲಿತಾಂಶದಿಂದ ಹತಾಶರಾಗಬೇಡಿ: ಪಂಚಾಯತ್ ಚುನಾವಣೆಗೆ ಸಿದ್ದರಾಗಿ; ಜೆಡಿಎಸ್ ಕಾರ್ಯಕರ್ತರಿಗೆ ದೇವೇಗೌಡರ ಪತ್ರ!

ವಿಧಾನಸಭಾ ಚುನಾವಣಾ ಫಲಿತಾಂಶದಿಂದ ಹತಾಶರಾಗಬೇಡಿ ಎಂದು ಜನತಾ ದಳ (ಜಾತ್ಯತೀತ) ವರಿಷ್ಠ ಎಚ್‌ಡಿ ದೇವೇಗೌಡರು ತಮ್ಮ ಪಕ್ಷದ ಅಭ್ಯರ್ಥಿಗಳು ಮತ್ತು ಇತರ ಪದಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರು: ವಿಧಾನಸಭಾ ಚುನಾವಣಾ ಫಲಿತಾಂಶದಿಂದ ಹತಾಶರಾಗಬೇಡಿ ಎಂದು ಜನತಾ ದಳ (ಜಾತ್ಯತೀತ) ವರಿಷ್ಠ ಎಚ್‌ಡಿ ದೇವೇಗೌಡರು ತಮ್ಮ ಪಕ್ಷದ ಅಭ್ಯರ್ಥಿಗಳು ಮತ್ತು ಇತರ ಪದಾಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.

ಪಕ್ಷದ ಅಭ್ಯರ್ಥಿಗಳು ಮತ್ತು ಪದಾಧಿಕಾರಿಗಳಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ, ಫಲಿತಾಂಶದಿಂದ ಅವರೆಲ್ಲರಿಗೂ ಅಚ್ಚರಿ ಮತ್ತು ನಿರಾಶೆಯಾಗಿದೆ ಎಂದು ಹೇಳಿದ್ದಾರೆ. ಚುನಾವಣಾ ಫಲಿತಾಂಶ ಮತ್ತು ಪಕ್ಷವನ್ನು ಬಲಪಡಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಪಕ್ಷದ ರಾಜ್ಯಾಧ್ಯಕ್ಷ ಮತ್ತು ಶಾಸಕಾಂಗ ಪಕ್ಷದ ನಾಯಕರಿಗೆ ಸಭೆ ಕರೆಯುವಂತೆ ತಿಳಿಸಿದ್ದೇನೆ ಎಂದು ಗೌಡರು ಹೇಳಿದ್ದಾರೆ.

ಜೆಡಿಎಸ್ ಚುನಾವಣೆಯಲ್ಲಿ ಸೋತಿದ್ದರೂ ನಂತರ ಪುಟಿದೆದ್ದ ಹಿಂದಿನ ಉದಾಹರಣೆಗಳನ್ನು ಅವರು ಉಲ್ಲೇಖಿಸಿದ್ದಾರೆ ಮತ್ತು ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗುವಂತೆ ಪ್ರೋತ್ಸಾಹಿಸಿದ್ದಾರೆ. ಏತನ್ಮಧ್ಯೆ, ಗುರುವಾರ ಗೌಡರ 91 ನೇ ಹುಟ್ಟುಹಬ್ಬವಿದ್ದು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT