ತುಷಾರ್ ಗಿರಿನಾಥ್ 
ರಾಜ್ಯ

ಮಹದೇವಪುರ ವಲಯದ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಶೀಘ್ರದಲ್ಲೇ ಪುನರಾರಂಭ: ಬಿಬಿಎಂಪಿ ಮುಖ್ಯ ಆಯುಕ್ತ

ಮಹದೇವಪುರ ವಲಯದ ರಾಜಕಾಲುವೆ ಮೇಲಿನ 34 ಒತ್ತುವರಿಗಳನ್ನು ತೆರವುಗೊಳಿಸಲು ಕಂದಾಯ ಇಲಾಖೆ ಆದೇಶ ಹೊರಡಿಸಿರುವುದರಿಂದ ಪಾಲಿಕೆ ಶೀಘ್ರದಲ್ಲಿಯೇ ಒತ್ತವರಿ ತೆರವು ಕಾರ್ಯಾಚರಣೆ ಪುನರಾರಂಭಿಸಲಾಗುತ್ತದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು: ಮಹದೇವಪುರ ವಲಯದ ರಾಜಕಾಲುವೆ ಮೇಲಿನ 34 ಒತ್ತುವರಿಗಳನ್ನು ತೆರವುಗೊಳಿಸಲು ಕಂದಾಯ ಇಲಾಖೆ ಆದೇಶ ಹೊರಡಿಸಿರುವುದರಿಂದ ಪಾಲಿಕೆ ಶೀಘ್ರದಲ್ಲಿಯೇ ಒತ್ತವರಿ ತೆರವು ಕಾರ್ಯಾಚರಣೆ ಪುನರಾರಂಭಿಸಲಾಗುತ್ತದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕಾರ್ಯಾಚರಣೆಯು ಬಿಬಿಎಂಪಿಯ ಮುಂಗಾರು ಪೂರ್ವ ಸಿದ್ಧತೆ ಯೋಜನೆಯ ಭಾಗವಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 600 ಮಳೆನೀರು ಚರಂಡಿ ಒತ್ತುವರಿ ಪ್ರಕರಣಗಳು ಬಾಕಿ ಇವೆ. ಈಗ ಕಂದಾಯ ಇಲಾಖೆ ಒತ್ತುವರಿ ತೆರವಿಗೆ ಆದೇಶ ಹೊರಡಿಸಿದ್ದು, ಅದರಂತೆ ಕಾರ್ಯಾಚರಣೆಯನ್ನು ಪುನರಾರಂಭಿಸುತ್ತೇವೆಂದು ಹೇಳಿದರು.

ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಕಂದಾಯ ಇಲಾಖೆ ಆದೇಶ ಹೊರಡಿಸಿತ್ತು. ಚುನಾವಣೆ ವೇಳೆ ತೆರವು ಕಾರ್ಯಾಚರಣೆ ಆರಂಭಿಸಿದರೆ ಅದು ಮತದಾರರಲ್ಲಿ ಗೊಂದಲಕ್ಕೆ ಕಾರಣವಾಗಬಹುದೆಂಬ ಕಾರಣಕ್ಕೆ ಪಾಲಿಕೆ ಚುನಾವಣೆ ಮುಗಿಯುವವರೆಗೆ ಕಾಯುತ್ತಿತ್ತು ಎಂದು ತಿಳಿಸಿದರು.

ಬಳಿಕ ಮಾತನಾಡಿದ ಬಿಬಿಎಂಪಿಯ ಮಳೆನೀರು ಚರಂಡಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮಾಲತಿ ಆರ್ ಅವರು, ಒತ್ತುವರಿ ವಿಚಾರವಾಗಿ ಬುಧವಾರ ಸಭೆ ನಡೆಸಲಾಗಿದೆ. ತೆರವು ಕಾರ್ಯಾಚರಣೆ ಸೋಮವಾರ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಹೇಳಿದರು.

ವರ್ತೂರು ಮತ್ತು ಬೆಳ್ಳಂದೂರು ಕೆರೆಗಳ ಬಳಿ ಬಿಬಿಎಂಪಿ ಅತಿಕ್ರಮಣವನ್ನು ಗುರುತಿಸಿದೆ, ಆದರೆ, ಆ ಪ್ರದೇಶದಲ್ಲಿ ಯಾವುದೇ ಕಾರ್ಯಾಚರಣೆಗಳನ್ನೂ ನಡೆಸಿಲ್ಲ ಎಂದು ವರ್ತೂರು ರೈಸಿಂಗ್‌ನ ಜಗದೀಶ್ ರೆಡ್ಡಿ ಅವರು ಹೇಳಿದ್ದಾರೆ.

ಮಳೆನೀರು ಚರಂಡಿಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಬಿಬಿಎಂಪಿ ತನ್ನ ಧೋರಣೆಯನ್ನು ಬದಲಿಸಿಕೊಂಡಿಲ್ಲ ಎಂದು ಎಎಪಿ ಮುಖಂಡ ಅಶೋಕ್ ಮೃತುಂಜಯ ಹೇಳಿದ್ದಾರೆ.

ಮುಂಗಾರು ಮಳೆಗೆ ಕೆಲವೇ ದಿನಗಳು ಬಾಕಿ ಇರುವಾಗ ಬಿಬಿಎಂಪಿ ಅತಿಕ್ರಮಣಗಳ ವಿರುದ್ಧ ತನ್ನ ಕಾರ್ಯಾಚರಣೆಯನ್ನು ಪುನರಾರಂಭಿಸುತ್ತಿದೆ. ಕಳೆದ ಬಾರಿಯಂತೆಯೇ ಈ ಬಾರಿ ಕೂಡ ಪಾಲಿಕೆಯು ಶ್ರೀಮಂತ ಹಾಗೂ ಪ್ರಭಾವಿ ನಾಯಕರ ಅತಿಕ್ರಮಣಗಳ ಮೇಲೆ ಕಾರ್ಯಾಚರಣೆ ನಡೆಸುವುದಿಲ್ಲ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!