ಸಂಗ್ರಹ ಚಿತ್ರ 
ರಾಜ್ಯ

9 ವರ್ಷಗಳ ಬಳಿಕ ನೀರಿನ ದರ ಹೆಚ್ಚಳಕ್ಕೆ ಬಿಡಬ್ಲ್ಯೂಎಸ್ಎಸ್'ಬಿ ಮುಂದು!

ನೀರಿನ ದರ ಪರಿಷ್ಕರಿಸುವಂತೆ ಬೆಂಗಳೂರು ಜಲಮಂಡಳಿ ನೂತನವಾಗಿ ರಚನೆಗೊಳ್ಳುವ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದು, ಸರ್ಕಾರ ಸಮ್ಮತಿ ನೀಡಿದ್ದೇ ಆದರೆ, ಜನರಿಗೆ ನೀರು ಇನ್ನಷ್ಟು ದುಬಾರಿಯಾಗಲಿದೆ.

ಬೆಂಗಳೂರು: ನೀರಿನ ದರ ಪರಿಷ್ಕರಿಸುವಂತೆ ಬೆಂಗಳೂರು ಜಲಮಂಡಳಿ ನೂತನವಾಗಿ ರಚನೆಗೊಳ್ಳುವ ಸರ್ಕಾರಕ್ಕೆ ಪತ್ರ ಬರೆಯಲು ಮುಂದಾಗಿದ್ದು, ಸರ್ಕಾರ ಸಮ್ಮತಿ ನೀಡಿದ್ದೇ ಆದರೆ, ಜನರಿಗೆ ನೀರು ಇನ್ನಷ್ಟು ದುಬಾರಿಯಾಗಲಿದೆ.

ತೊರೆಕಾಡನಹಳ್ಳಿ ಜಲಾಶಯದಿಂದ 90 ಕಿ.ಮೀ ದೂರದವರೆಗೆ ಬೆಂಗಳೂರಿಗೆ ಕಾವೇರಿ ನೀರು ಹರಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಪ್ರತಿ ತಿಂಗಳು ಸುಮಾರು 70 ಲಕ್ಷ ರುಪಾಯಿ ವಿದ್ಯುತ್ ಬಿಲ್ ಪಾವತಿ ಮಾಡುತ್ತಿತ್ತು. ವಿದ್ಯುತ್ ದರ ಹೆಚ್ಚಾದ ಹಿನ್ನೆಲೆಯಲ್ಲಿ ಈ ದರ ಇದೀಗ 74 ಲಕ್ಷ ರುಪಾಯಿಗಳಿಗೆ ಹೆಚ್ಚಳವಾಗಿದೆ.

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಪ್ರಸಕ್ತ ಸಾಲಿನ ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿ ಇಂಧನ ದರವನ್ನು  (ಯೂನಿಟ್‌ಗೆ 70 ಪೈಸೆ) ಶೇ.8.31 ಹೆಚ್ಚಳ ಮಾಡಿದೆ. ಪ್ರಸ್ತುತ ಬಿಡಬ್ಲ್ಯೂಎಸ್ಎಸ್'ಬಿ ಕೆಪಿಟಿಸಿಎಲ್ ಮತ್ತು ಸಿಇಎಸ್'ಸಿಗೆ ಬಿಲ್ ಪಾವತಿ ಮಾಡುತ್ತಿದೆ.

ದರ ಹೆಚ್ಚಳ ಕುರಿತು ಮಾತನಾಡಿದ ಬಿಡಬ್ಲ್ಯುಎಸ್‌ಎಸ್‌ಬಿ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, 6 ತಿಂಗಳ ಹಿಂದೆ ಸರ್ಕಾರಕ್ಕೆ ಈ ಬಗ್ಗೆ ಪ್ರಸ್ತಾವನೆ ಕಳುಹಿಸಲಾಗಿತ್ತು. ಚುನಾವಣಾ ವರ್ಷ ಹಿನ್ನೆಲೆಯಲ್ಲಿ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ. ವಿದ್ಯುತ್ ದರ ಹೆಚ್ಚಾದ ಹಿನ್ನೆಲೆಯಲ್ಲಿ ದರ ಹೆಚ್ಚಳದ ಚಿಂತನೆಗಳು ಬಂದಿದ್ದವು. ಇದೀಗ ಹೊಸ ಸರ್ಕಾರಕ್ಕೆ ಹೊಸ ಪ್ರಸ್ತಾವನೆ ಸಲ್ಲಿಸುತ್ತೇವೆ. 2014ರ ನವೆಂಬರ್ 2ರಲ್ಲಿ ದರ ಹೆಚ್ಚಳ ಮಾಡಲಾಗಿತ್ತು ಎಂದು ಹೇಳಿದ್ದಾರೆ.

ಅಸ್ತಿತ್ವದಲ್ಲಿರುವ ನೀರಿನ ದರ ಇಂತಿದೆ...
8,000 ಲೀಟರ್‌ಗಳವರೆಗೆ: ರೂ 7
25,000 ಲೀಟರ್ ವರೆಗೆ: ರೂ 11
50,000 ಲೀಟರ್‌ಗಳವರೆಗೆ: ರೂ 26
50,000 ಲೀಟರ್‌ಗಳಿಗಿಂತ ಹೆಚ್ಚು: ರೂ 45ಗಳಷ್ಟಿದೆ.

ಗೃಹೇತರ ಉದ್ದೇಶಗಳಿಗೆ ಬಳಸುವ ನೀರಿನ ದರ...
10,000 ಲೀಟರ್‌ಗಳವರೆಗೆ: ರೂ 50
25,000 ಲೀಟರ್ ವರೆಗೆ: ರೂ 57
50,000 ಲೀಟರ್ ವರೆಗೆ: ರೂ 65
75,000 ಲೀಟರ್‌ಗಳವರೆಗೆ: ರೂ 76
ಅದಕ್ಕಿಂತ ಹೆಚ್ಚಿನ 75,000 ಲೀಟರ್‌ಗಳು: ರೂ 87ಗಳಷ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ