ರಾಜ್ಯ

ನಾಳೆ, ನಾಡಿದ್ದು ಸಿಇಟಿ: ವಿದ್ಯಾರ್ಥಿಗಳು ಅನುಸರಿಸಬೇಕಾದ ನಿಯಮಗಳು ಹೀಗಿವೆ

Sumana Upadhyaya

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ರಾಜ್ಯಾದ್ಯಂತ ನಾಳೆ ಮೇ 20 ಮತ್ತು 21ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (KCET) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. 

ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಫಾರ್ಮಸಿ, ನ್ಯಾಚುರೋಪಥಿ, ಯೋಗ ಹಾಗೂ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ ಗಳಿಗೆ ನಡೆಯುವ ಪ್ರವೇಶಾತಿ ಪರೀಕ್ಷೆ ಇದಾಗಿದ್ದು ಇದರಲ್ಲಿ ಹಲವಾರು ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ. ರಾಜ್ಯಾದ್ಯಂತ 592 ಪರೀಕ್ಷಾ ಕೇಂದ್ರಗಳಲ್ಲಿ ಜರುಗುವ ಸಿಇಟಿ ಪರೀಕ್ಷೆ ‌ ಈ ಬಾರಿ 2 ಲಕ್ಷದ 61 ಸಾವಿರದ 610 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಹಾಜರಾಗಲಿದ್ದಾರೆ.

ಬೆಂಗಳೂರು ಸೇರಿದಂತೆ ಬೆಳಗಾವಿ, ವಿಜಯಪುರ, ಬಳ್ಳಾರಿ ಹಾಗೂ ಮಂಗಳೂರು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 2.084 ಅರ್ಹ ಅಭ್ಯರ್ಥಿಗಳು ‌ಪರೀಕ್ಷೆ ತೆಗೆದುಕೊಂಡಿದ್ದಾರೆ. ಪರೀಕ್ಷೆ ನಡೆಸಲು 592 ವೀಕ್ಷಕರು, ‌1.184 ವಿಶೇಷ ಸ್ಕ್ಯಾಡ್ 592 ಕಸ್ಟೋಡಿಯನ್ಸ್ ಸೇರಿದಂತೆ 23 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ‌ಮಾಹಿತಿ ನೀಡಿದೆ.

ಪ್ರಶ್ನೆ ಪತ್ರಿಕೆಗಳನ್ನು ಇಂಗ್ಲಿಷ್ ಮತ್ತು ಕನ್ನಡದಲ್ಲಿ ಮುದ್ರಿಸಲಾಗುವುದು ಎಂದು ಕೆಇಎ ತಿಳಿಸಿದೆ. ವ್ಯತ್ಯಾಸಗಳಿದ್ದಲ್ಲಿ, ಪ್ರಶ್ನೆ ಪತ್ರಿಕೆ ಮತ್ತು ಉತ್ತರಗಳ ಇಂಗ್ಲಿಷ್ ಆವೃತ್ತಿಯನ್ನು ಅಂತಿಮ ಆವೃತ್ತಿಯಾಗಿ ತೆಗೆದುಕೊಳ್ಳಲಾಗುತ್ತದೆ.

ಅಭ್ಯರ್ಥಿಗಳಿಗೆ ವಿಶೇಷ ಸೂಚನೆಗಳು: 
- ಕೆಇಎ ವೆಬ್‌ಸೈಟ್‌ನಿಂದ ಪ್ರವೇಶ ಟಿಕೆಟ್ ಡೌನ್‌ಲೋಡ್ ಮಾಡಿ
- ವೇಳಾಪಟ್ಟಿಯನ್ನು ಗಮನಿಸಿ, ನಿಗದಿತ ಸಮಯದೊಳಗೆ ಪರೀಕ್ಷಾ ಕೊಠಡಿಯಲ್ಲಿರಿ. 
- ಮೂರಕ್ಕಿಂತ ಹೆಚ್ಚು ನೀಲಿ ಅಥವಾ ಕಪ್ಪು ಬಾಲ್ ಪಾಯಿಂಟ್ ಪೆನ್ನುಗಳನ್ನು ಒಯ್ಯುವಂತಿಲ್ಲ
- CET ಸಂಖ್ಯೆಯೊಂದಿಗೆ ದೊಡ್ಡ ಅಕ್ಷರಗಳಲ್ಲಿ ಹೆಸರನ್ನು ಬರೆಯಬೇಕು. OMR ಹಾಳೆಯ ಕೆಳಭಾಗದಲ್ಲಿ ಸಹಿ ಮಾಡಬೇಕು
- ಹಾನಿಗೊಳಗಾದ ಬುಕ್ ಲೆಟ್ ಸಿಕ್ಕಿದರೆ ಅದನ್ನು ಇನ್ವಿಜಿಲೇಟರ್ ಮೂಲಕ ಬದಲಿಸಿ
- ಅರ್ಧ ತೋಳಿನ ಉಡುಪುಗಳನ್ನು ಧರಿಸಬಹುದು
- ಮಾನ್ಯ ಫೋಟೋ ಐಡಿ ಪುರಾವೆಯನ್ನು ಒಯ್ಯಿರಿ

ಏನು ತರಬಾರದು
- ಎಲೆಕ್ಟ್ರಾನಿಕ್ ಉಪಕರಣಗಳು, ಗ್ಯಾಜೆಟ್‌ಗಳು, ಪೇಜರ್‌ಗಳು, ಮೊಬೈಲ್ ಫೋನ್‌ಗಳು ಮತ್ತು ಬ್ಲೂಟೂತ್ ಅಥವಾ ವೈರ್‌ಲೆಸ್ ಸಾಧನಗಳು
- ಬಿಳಿ ದ್ರವ
- ಕ್ಯಾಲ್ಕುಲೇಟರ್‌ಗಳು, ಕಾಗದದ ತುಣುಕುಗಳು, ಪುಸ್ತಕಗಳು ಮತ್ತು ಟಿಪ್ಪಣಿಗಳು
- ಕೈಗಡಿಯಾರಗಳು
- ಆಭರಣ

SCROLL FOR NEXT