ಸಾಂದರ್ಭಿಕ ಚಿತ್ರ 
ರಾಜ್ಯ

ನಾಳೆ ಸಿಇಟಿ ಪರೀಕ್ಷೆ ದಿನವೇ ನೂತನ ಮುಖ್ಯಮಂತ್ರಿ ಪ್ರಮಾಣ ವಚನ: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಭೀತಿ, ಪೊಲೀಸರಿಂದ ಕ್ರಮ

ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಾಳೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸಿಇಟಿ ಪರೀಕ್ಷೆ ನಡೆಯುತ್ತಿದೆ. ಮತ್ತೊಂದೆಡೆ ನಾಳೆ ಶನಿವಾರ ಮಧ್ಯಾಹ್ನವೇ 12.30ಕ್ಕೆ ಬೆಂಗಳೂರಿನಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಏರ್ಪಡಿಸಿರುವುದರಿಂದ ಪರೀಕ್ಷಾರ್ಥಿಗಳಿಗೆ ಟ್ರಾಫಿಕ್‌ ಸಮಸ್ಯೆ (Traffic Problems) ಭೀತಿ ಶುರುವಾಗಿದೆ. 

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಾಳೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸಿಇಟಿ ಪರೀಕ್ಷೆ ನಡೆಯುತ್ತಿದೆ. ಮತ್ತೊಂದೆಡೆ ನಾಳೆ ಶನಿವಾರ ಮಧ್ಯಾಹ್ನವೇ 12.30ಕ್ಕೆ ಬೆಂಗಳೂರಿನಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ಏರ್ಪಡಿಸಿರುವುದರಿಂದ ಪರೀಕ್ಷಾರ್ಥಿಗಳಿಗೆ ಟ್ರಾಫಿಕ್‌ ಸಮಸ್ಯೆ (Traffic Problems) ಭೀತಿ ಶುರುವಾಗಿದೆ. 

ಯಾವುದೇ ಸಮಸ್ಯೆಗಳು ನಡೆಯದಂತೆ ಎಲ್ಲಾ ಸಿದ್ದತೆ ಮಾಡಿಕೊಂಡಿದ್ದೇವೆ. ಕಂಠೀರವ ಕ್ರೀಡಾಂಗಣ ಸುತ್ತ ಮುತ್ತ ಇರುವ ಪರೀಕ್ಷಾ ಕೇಂದ್ರಗಳ ವಿವರಗಳನ್ನು ವೆಬ್ ಸೈಟ್ ನಲ್ಲಿ ಹಾಕುತ್ತೇವೆ.ಕ್ರೀಡಾಂಗಣ ಸುತ್ತಮುತ್ತ ವಿಧ್ಯಾರ್ಥಿಗಳು ಎರಡು ಗಂಟೆಗೂ ಮೊದಲೇ ಬರಬೇಕು ಎಂದು ರಮ್ಯಾ ತಿಳಿಸಿದ್ದಾರೆ.

ಈ ಮಧ್ಯೆ, ಪ್ರಮಾಣ ವಚನ ಸಮಾರಂಭದಿಂದ ಸಿಇಟಿ ವಿದ್ಯಾರ್ಥಿಗಳಿಗೆ ಸಂಚಾರ ದಟ್ಟಣೆಯ ಸಮಸ್ಯೆಯಾಗಲಿದೆಯಾ ಎಂಬ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಬೆಂಗಳೂರು ನಗರ ಸಂಚಾರ ಪೊಲೀಸರಿಗೆ ಪತ್ರ ಬರೆದು ಸಲಹೆ ಕೇಳಿದೆ. ಸಮಾರಂಭಕ್ಕೆ ಎಷ್ಟು ಜನ ಬರಬಹುದು. ಯಾವ್ಯಾವ ಭಾಗದಲ್ಲಿ ಸಮಸ್ಯೆ ಆಗಬಹುದು ಎಂಬ ಮಾಹಿತಿಯನ್ನು ಪೊಲೀಸರು ನೀಡಿದರೆ ಇದನ್ನು ಸರ್ಕಾರದ ಗಮನಕ್ಕೆ ತಂದು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ಯಾವ ಕ್ರಮ ಕೈಗೊಳ್ಳಬೇಕೆಂದು ನಿರ್ಧರಿಸಲು ಸಾಧ್ಯವಾಗುತ್ತದೆ ಎಂದು ನಿನ್ನೆ ಪತ್ರ ಬರೆದಿತ್ತು.

ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭ ವೇಳೆ ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳುತ್ತೇವೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ