ಶಾಸಕ ಹರೀಶ್ ಗೌಡ 
ರಾಜ್ಯ

ನಗರದಲ್ಲಿ ಹುಕ್ಕಾ ಬಾರ್​​, ಕ್ಯಾಸಿನೋ ಕ್ಲಬ್​​​ ಮುಚ್ಚಿಸುತ್ತೇನೆ: ನೂತನ ಶಾಸಕ ಹರೀಶ್ ಗೌಡ

ಮೈಸೂರು ನಗರದಲ್ಲಿ ಮೂರ್ನಾಲ್ಕು ಕಡೆ ಕ್ಯಾಸಿನೊ ಕ್ಲಬ್ ನಡೆಯುತ್ತಿದ್ದು. ಬಿಜೆಪಿಯವರೇ ಈ ಪರಂಪರೆಯನ್ನು ಬೆಳೆಸುತ್ತಿದ್ದಾರೆ. ರಾಜ್ಯದಲ್ಲಿ ಕ್ಯಾಸಿನೊ ಶುರು ಮಾಡಿದ್ದೇ ಬಿಜೆಪಿಯವರು. ನಾನು ಖಂಡಿತವಾಗಿ ಕ್ಯಾಸಿನೊ ಕ್ಲಬ್​ಗಳನ್ನು ಮುಚ್ಚಿಸುತ್ತೇನೆ ಎಂದು ಚಾಮರಾಜ ಕ್ಷೇತ್ರದ ನೂತನ ಶಾಸಕ ಹರೀಶ್ ಗೌಡ ಅವರು ಗುರುವಾರ ಹೇಳಿದ್ದಾರೆ.

ಮೈಸೂರು: ಮೈಸೂರು ನಗರದಲ್ಲಿ ಮೂರ್ನಾಲ್ಕು ಕಡೆ ಕ್ಯಾಸಿನೊ ಕ್ಲಬ್ ನಡೆಯುತ್ತಿದ್ದು. ಬಿಜೆಪಿಯವರೇ ಈ ಪರಂಪರೆಯನ್ನು ಬೆಳೆಸುತ್ತಿದ್ದಾರೆ. ರಾಜ್ಯದಲ್ಲಿ ಕ್ಯಾಸಿನೊ ಶುರು ಮಾಡಿದ್ದೇ ಬಿಜೆಪಿಯವರು. ನಾನು ಖಂಡಿತವಾಗಿ ಕ್ಯಾಸಿನೊ ಕ್ಲಬ್​ಗಳನ್ನು ಮುಚ್ಚಿಸುತ್ತೇನೆ ಎಂದು ಚಾಮರಾಜ ಕ್ಷೇತ್ರದ ನೂತನ ಶಾಸಕ ಹರೀಶ್ ಗೌಡ ಅವರು ಗುರುವಾರ ಹೇಳಿದ್ದಾರೆ.

ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕನಾಗಿ ಆಯ್ಕೆ ಮಾಡಿದ ಕ್ಷೇತ್ರದ ಮತದಾರರಿಗೆ ಹಾಗೂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಖರ್ಗೆಯವರಿಗೆ ಅಭಿನಂದನೆ ಸಲ್ಲಿಸಿದರು. ಮೈಸೂರು ನಗರದಲ್ಲಿ ಹುಕ್ಕಾ ಬಾರ್ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಗರದ ಕೆಲವು ಭಾಗಗಳಲ್ಲಿ ಹುಕ್ಕಾ ಬಾರ್ ಇದೆ. ಆದರೆ, ಇದರ ಜೊತೆಗೆ ಮೈಸೂರು ನಗರದಲ್ಲಿ ಮೂರ್ನಾಲ್ಕು ಕಡೆ ಕ್ಯಾಸಿನೊ ನಡೆಯುತ್ತಿದ್ದು. ರಾಜ್ಯದಲ್ಲಿ ಬಿಜೆಪಿಯವರು ಕ್ಯಾಸಿನೊ ಪರಂಪರೆ ಬೆಳೆಸಿದ್ದಾರೆಂದು ಆರೋಪಿಸಿದರು.

ಮಾಜಿ ಮಂತ್ರಿ ಅಶ್ವಥ್ ನಾರಾಯಣ್ ಅವರು ಒಮ್ಮೆ ಕರೆ ಮಾಡಿ ನನ್ನ ಕುಟುಂಬದ ಸದಸ್ಯರು ಇಲ್ಲಿ ಕ್ಯಾಸಿನೊ ನಡೆಸುತ್ತಿದ್ದಾರೆ, ಅವರಿಗೆ ತೊಂದರೆ ಕೊಡಬೇಡ ಎಂದು ಹೇಳಿದ್ದರು, ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ ಜೂಜು ಅಡ್ಡೆ ಹೆಚ್ಚಾಗಿದ್ದು, ಖಂಡಿತವಾಗಿಯೂ ನನ್ನ ಕ್ಷೇತ್ರದ ವ್ಯಾಪ್ತಿಯಲ್ಲಿ ಅವುಗಳನ್ನು ಮುಚ್ಚಿಸುವ ಕೆಲಸ ಮಾಡುತ್ತೇನೆಂದು ಹೇಳಿದರು.

ನನ್ನ ಕ್ಷೇತ್ರ ಕಾಂಗ್ರೆಸ್​ ಪಕ್ಷದ ಭದ್ರಕೋಟೆ, ಇಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮಾತ್ರ ಗೆಲ್ಲುತ್ತದೆ. ಆದರೆ, ಕಳೆದ ಬಾರಿ ಗೊಂದಲದಿಂದ ಬಿಜೆಪಿ ಗೆದ್ದಿತ್ತು ಎಂದು ತಿಳಿಸಿದರು.

ಬಳಿಕ ಪಬ್ ಹಾಗೂ ಹುಕ್ಕಾ ಬಾರ್​​ಗಳಿಂದ ಹಣ ಪಡೆದಿದ್ದಾರೆಂಬ ಮಾಜಿ ಶಾಸಕ ನಾಗೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡಿದ ಹರೀಶ್ ಗೌಡ ಅವರು, ನಾನು ಹುಕ್ಕಾ ಬಾರ್​​ಗಳಿಂದ ಹಣ ಪಡೆದಿದ್ದೇನೆ ಎಂಬುದು ಸುಳ್ಳು, ನಾನು ಚುನಾವಣೆಗಾಗಿ ಯಾರಿಂದಲೂ ಹಣ ಪಡೆದಿಲ್ಲ. ನನಗೆ ಪಕ್ಷ ನೀಡಿದ ಹಣದಿಂದಲೇ ಚುನಾವಣೆ ಮಾಡಿದ್ದೇನೆಂದು ಸ್ಪಷ್ಟಪಡಿಸಿದರು.

ಯಾವ ಪಬ್, ಬಾರ್, ಹುಕ್ಕಾ ಬಾರ್​​ಗಳಿಂದ ಹಣ ಪಡೆದಿಲ್ಲ. ಇವುಗಳನ್ನು ನೂರಕ್ಕೆ ನೂರರಷ್ಟು ಮುಚ್ಚಿಸುತ್ತೇನೆ. ನನಗೆ ಮೂರು ಪಕ್ಷದ ಕಾರ್ಯಕರ್ತರು ಸಹಾಯ ಮಾಡಿ, ಬೆಂಬಲಕ್ಕೆ ನಿಂತು ಗೆಲ್ಲಿಸಿದ್ದಾರೆ ಅವರಿಗೆ ಧನ್ಯವಾದಗಳು ಎಂದರು.

ಮೈಸೂರಿಗೆ ಕ್ಯಾಸಿನೊ ತಂದಿದ್ದರಿಂದ ನಮ್ಮ ಮಕ್ಕಳು ಹಾಳಾಗುತ್ತಾರೆಂದು ಆ ವೇಳೆಯಲ್ಲಿ ನಗರ ಪೋಲಿಸ್ ಆಯುಕ್ತರ ಗಮನಕ್ಕೆ ನಾನೇ ತಂದಿದ್ದೆ. ಆ ಸಮಯದಲ್ಲಿ ಪೋಲಿಸ್ ಆಯುಕ್ತರು ಕ್ಯಾಸಿನೊ ಬಂದ್ ಮಾಡುವಂತೆ ಕೆಲಸ ಮಾಡಿದ್ದರು. ಇದು ಹಿಂದಿನ ಬಿಜೆಪಿ ಶಾಸಕರಿಗೆ ಗೊತ್ತಿಲ್ಲವೇ ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT