ಖ್ಯಾತ ನೇತ್ರ ತಜ್ಞ ಭುಜಂಗ ಶೆಟ್ಟಿ 
ರಾಜ್ಯ

ಖ್ಯಾತ ನೇತ್ರ ತಜ್ಞ ಭುಜಂಗ ಶೆಟ್ಟಿ ನಿಧನ

ನಾರಾಯಣ ನೇತ್ರಾಯಲಯದ ಮುಖ್ಯಸ್ಥ ಭುಜಂಗ ಶೆಟ್ಟಿ (69) ಇಂದು ನಿಧನರಾದರು. 

ಬೆಂಗಳೂರು: ನಾರಾಯಣ ನೇತ್ರಾಯಲಯದ ಅಧ್ಯಕ್ಷ ಭುಜಂಗ ಶೆಟ್ಟಿ (69) ಇಂದು ನಿಧನರಾದರು. 

ಭುಜಂಗ ಶೆಟ್ಟಿ ದೇಶದ ಖ್ಯಾತ ನೇತ್ರ ತಜ್ಞರಾಗಿದ್ದರು. ಯಶವಂತಪುರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಂಜೆ ಹೃದಯಾಘಾತ ಸಂಭವಿಸಿದ್ದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಇಂದು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ನೀಡಿ ಮನೆಗೆ ವಾಪಸ್ಸಾಗಿದ್ದ ಭುಜಂಗ ಶೆಟ್ಟಿ ಅವರಿಗೆ ಸಂಜೆ ತೀವ್ರ ಹೃದಯಾಘಾತ ಉಂಟಾಗಿತ್ತು. 

ಭುಜಂಗ ಶೆಟ್ಟಿ ಅವರು 1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿದ್ದರು. 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದಲ್ಲಿ ರೆಸಿಡೆನ್ಸಿ ತರಬೇತಿ ಪಡೆದಿದ್ದರು. 80ರ ದಶಕದಲ್ಲಿ ಸಣ್ಣ ಕ್ಲಿನಿಕ್‌ನಲ್ಲಿ ನೇತ್ರ ಚಿಕಿಯ್ಸಾಲಯವನ್ನು ಪ್ರಾರಂಭಿಸಿದ ಡಾ. ಭುಜಂಗ ಶೆಟ್ಟಿ ನಾರಾಯಣ ನೇತ್ರಾಯಲದ ಅಧ್ಯಕ್ಷರಾಗಿದ್ದರು. 

ಭುಜಂಗ ಶೆಟ್ಟಿ ನಾರಾಯಣ ನೇತ್ರಾಲಯದಲ್ಲಿ ವಿವಿಧ ಉಪವಿಭಾಗಗಳ ಅಭಿವೃದ್ಧಿಯನ್ನು ಸಕ್ರಿಯವಾಗಿ ಪ್ರೋತ್ಸಾಹಿಸಿದ್ದಾರೆ ಮತ್ತು ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಲು ಕಾರಣರಾಗಿದ್ದರು. ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸೆಯಲ್ಲಿ ನೈಪುಣ್ಯತೆ ಹೊಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT