ಪ್ರದೀಪ್ ಈಶ್ವರ್ 
ರಾಜ್ಯ

ನೂತನ ಶಾಸಕ ಪ್ರದೀಪ್‌ ಈಶ್ವರ್‌ ಗೆ ಆಘಾತ: ಸಾಕು ತಾಯಿ ರತ್ನಮ್ಮ ವಿಧಿವಶ

ಮಾಜಿ ಸಚಿವ ಡಾ. ಕೆ. ಸುಧಾಕರ್‌ ವಿರುದ್ಧ ಗೆದ್ದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್​ ಅವರ ಸಾಕು ತಾಯಿ ರತ್ನಮ್ಮ (72) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಬೆಂಗಳೂರು: ಮಾಜಿ ಸಚಿವ ಡಾ. ಕೆ. ಸುಧಾಕರ್‌ ವಿರುದ್ಧ ಗೆದ್ದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್​ ಅವರ ಸಾಕು ತಾಯಿ ರತ್ನಮ್ಮ (72) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಅಂತಿಮ ದರ್ಶನ ಪಡೆಯಲು ಪ್ರದೀಪ್ ಈಶ್ವರ್ ಬೆಂಗಳೂರಿನಿಂದ ಪೇರೇಸಂದ್ರ ಗ್ರಾಮಕ್ಕೆ ತೆರಳಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಪ್ರದೀಪ್‌ ಸಾಕು ತಾಯಿ ರತ್ನಮ್ಮ ಅವರು ಚಿಕ್ಕಬಳ್ಳಾಪುರದ ಪೇರೇಸಂದ್ರ ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ.

ಇಂದು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಅವರ ಪ್ರಮಾಣ ವಚನ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಬಂದಿದ್ದ ಪ್ರದೀಪ್‌ ಅವರು ಸುದ್ದಿ ತಿಳಿಯುತ್ತಿದ್ದಂತೆ ಪೇರೇಸಂದ್ರ ಗ್ರಾಮಕ್ಕೆ ತೆರಳಿದ್ದು, ಅಂತ್ಯ ಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. ಮೇ 10 ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಆರೋಗ್ಯ ಸಚಿವ ಡಾ.ಸುಧಾಕರ್​ ಅವರನ್ನು ಸೋಲಿಸಿ ಪ್ರದೀಪ್‌ ಈಶ್ವರ್‌ ಶಾಸಕರಾಗಿ ವಿಧಾನಸಭೆಗೆ ಆಯ್ಕೆ ಆಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿಎಂ ದೊಡ್ಡವರು, ಅವರು ಹೇಳಿದ್ದನ್ನು ನಾವು ಚಿಕ್ಕವರು ಕೇಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್ ಮಾರ್ಮಿಕ ನುಡಿ; ರಾತ್ರಿ ಆಪ್ತ ಶಾಸಕರೊಂದಿಗೆ ಸಭೆ!

ದುಬೈ ಏರ್ ಶೋ ವೇಳೆ ದುರಂತ; ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ

ತಮಿಳುನಾಡಿನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: ಸಿಂಗಂ ಅಣ್ಣಾಮಲೈ ಗೆ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ!

"ದೇಶದ ಭದ್ರತೆಗೆ ಧಕ್ಕೆ ತಂದ್ರೆ ಬಿಡಲ್ಲ": ರಿಸಿನ್ ದಾಳಿ ಸಂಚು ರೂಪಿಸಿದ್ದ ಭಯೋತ್ಪಾದಕನಿಗೆ ಜೈಲಿನಲ್ಲಿ ಕೈದಿಗಳಿಂದ ಧರ್ಮದೇಟು; ವೈದ್ಯ ಉಗ್ರ ಆಸ್ಪತ್ರೆಗೆ ದಾಖಲು!

News headlines 21-11-2025| CM ಬದಲಾವಣೆ ವಿಷಯ; ಶಾಸಕರಿಗೆ ಹೈಕಮಾಂಡ್ ಮಹತ್ವದ ಸೂಚನೆ; ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಿಯಾಯಿತಿ; ಹಡಗು ನಿರ್ಮಾಣ, ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಇಬ್ಬರ ಬಂಧನ

SCROLL FOR NEXT