ಸಂಗ್ರಹ ಚಿತ್ರ 
ರಾಜ್ಯ

ಸಿದ್ದರಾಮಯ್ಯ ನೇತೃತ್ವದಲ್ಲಿಂದು ಮೊದಲ ಸಂಪುಟ ಸಭೆ: 5 ಗ್ಯಾರಂಟಿಗಳತ್ತ ಎಲ್ಲರ ಚಿತ್ತ

ಶನಿವಾರದಿಂದ ರಾಜ್ಯದಲ್ಲಿ ಹೊಸ ಸರ್ಕಾರ ಆಡಳಿತ ನಡೆಸಲಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಂದು ವಿಧಾನಸೌಧದಲ್ಲಿ ಮೊದಲ ಸಂಪುಟ ಸಭೆ ನಡೆಯಲಿದೆ. ಹೀಗಾಗಿ ರಾಜ್ಯದ ಜನರ ಚಿತ್ತ 5 ಗ್ಯಾರಂಟಿಗಳತ್ತ ನೆಟ್ಟಿದೆ.

ಬೆಂಗಳೂರು: ಶನಿವಾರದಿಂದ ರಾಜ್ಯದಲ್ಲಿ ಹೊಸ ಸರ್ಕಾರ ಆಡಳಿತ ನಡೆಸಲಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಬಳಿಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿಂದು ವಿಧಾನಸೌಧದಲ್ಲಿ ಮೊದಲ ಸಂಪುಟ ಸಭೆ ನಡೆಯಲಿದೆ. ಹೀಗಾಗಿ ರಾಜ್ಯದ ಜನರ ಚಿತ್ತ 5 ಗ್ಯಾರಂಟಿಗಳತ್ತ ನೆಟ್ಟಿದೆ.

ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಈ ಗ್ಯಾರಂಟಿಗಳನ್ನು ಮೊದಲ ಸಂಪುಟ ಸಭೆಯಲ್ಲಿಯೇ ಜಾರಿ ಮಾಡುವುದಾಗಿ ಹೇಳಿದ್ದರು. ಕುಟುಂಬದ ಮಹಿಳೆಗೆ ಪ್ರತಿ ತಿಂಗಳು ರೂ. 2,000 ನೀಡುವ ಗೃಹಲಕ್ಷ್ಮಿ ಯೋಜನೆ, ಪ್ರತಿ ತಿಂಗಳು ಗೃಹ ಬಳಕೆಯ 200 ಯುನಿಟ್​ವರೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ, ಪದವಿಧರರಿಗೆ ರೂ.3,000 ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ.1,500 ನೀಡುವ ಯುವನಿಧಿ ಯೋಜನೆ, ರಾಜ್ಯದ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್ ಪ್ರಯಾಣ ಹಾಗೂ ಬಿಪಿಎಲ್ ಕಾರ್ಡ್​ದಾರರಿಗೆ 10 ಕೆ.ಜಿ. ಅನ್ನಭಾಗ್ಯ ಯೋಜನೆಯ ಒಟ್ಟು ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯುವ ಸಂಪುಟ ಸಭೆಯು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪದಗ್ರಹಣ ಮಾಡಲಿದ್ದಾರೆ. ಇದರ ಜೊತೆಗೆ ಸುಮಾರು 8 ಮಂತ್ರಿಗಳೂ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಆ ಮೂಲಕ ಇಂದಿನಿಂದ ಕಾಂಗ್ರೆಸ್ ರಾಜ್ಯಭಾರ ಆರಂಭವಾಗಲಿದೆ.

ಗ್ಯಾರಂಟಿಗಳಿಗೆ ಷರತ್ತಿನ ಭೀತಿ
ಸಂಪುಟ ಸಭೆಯಲ್ಲಿ ಐದೂ ಗ್ಯಾರಂಟಿಗಳಿಗೆ ಅಸ್ತು ನೀಡಲಾಗುತ್ತಾ ಅಥವಾ ಉಚಿತ ವಿದ್ಯುತ್ ಗ್ಯಾರಂಟಿ, ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಮಾತ್ರ ಅನುಮೋದನೆ ನೀಡಲಾಗುತ್ತಾ ಎಂಬ ಪ್ರಶ್ನೆಗಳು ಮೂಡಿವೆ. ಉಳಿದ ಗ್ಯಾರಂಟಿಗಳನ್ನು ಸಂಬಂಧಿತ ಇಲಾಖೆಗಳಿಂದ ಸ್ಪಷ್ಟ ರೂಪುರೇಷೆಯನ್ನು ಪಡೆದ ಬಳಿಕ ಜಾರಿಗೊಳಿಸುವ ಸಾಧ್ಯತೆನೂ ಇದೆ.

ಈ ಮಧ್ಯೆ ಈ ಐದೂ ಗ್ಯಾರಂಟಿಗಳಿಗೆ ಷರತ್ತು ಅನ್ವಯಿಸುವ ಭೀತಿ ರಾಜ್ಯದ ಜನರಲ್ಲಿ ಕಾಡುತ್ತಿದೆ. ಹಾಗಾಗಿ ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಷರತ್ತಿನೊಂದಿಗೆ ಗ್ಯಾರಂಟಿಗಳಿಗೆ ಅನುಮೋದನೆ ನೀಡುತ್ತ ಎಂಬುದು ಎಲ್ಲರಿಗಿರುವ ಅನುಮಾನವಾಗಿದೆ. ಈಗಾಗಾಲೇ ಕೆಲ ಕಾಂಗ್ರೆಸ್ ನಾಯಕರು ಷರತ್ತು ವಿಧಿಸುವ ಬಗ್ಗೆ ಸುಳಿವು ನೀಡಿದ್ದಾರೆ.

ಗ್ಯಾರಂಟಿಗಳು ಎಲ್ಲರಿಗೂ ಅನ್ವಯವಾಗುತ್ತಾ ಅಥವಾ ಬಿಪಿಎಲ್ ಕಾರ್ಡ್ ದಾರರಿಗೆ ಮಾತ್ರ ಅನ್ವಯವಾಗುತ್ತಾ ಎಂಬ ಬಗ್ಗೆ ಹಲವು ಪ್ರಶ್ನೆಗಳು ಎದ್ದಿವೆ. ಇಂದು ನಡೆಯಲಿರುವ ಸಂಪುಟ ತೀರ್ಮಾನ ಈ ಎಲ್ಲಾ ಅನುಮಾನ, ಆತಂಕ, ಪ್ರಶ್ನೆಗಳಿಗೆ ತೆರೆ ಎಳೆಯುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!