ಬೆಂಗಳೂರು: ಇತ್ತೀಚಿಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಂಡ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿರುವುದಕ್ಕೆ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜ್ಯದ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ. ನೂತನ ಸರ್ಕಾರ ರಾಜ್ಯದ ಅಭಿವೃದ್ಧಿ ಹಾದಿಯಲ್ಲಿ ಕೆಲಸ ಮಾಡಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ವಿಡಿಯೋ ಸಂದೇಶ ಹಂಚಿಕೊಂಡಿರುವ ಸೋನಿಯಾ ಗಾಂಧಿ, ವಿಭಜನೆ ರಾಜಕೀಯ, ಭ್ರಷ್ಟಾಚಾರ ವಿರುದ್ಧ ಐತಿಹಾಸಿಕ ಜನಾದೇಶ ನೀಡಿರುವುದಕ್ಕೆ ಕರ್ನಾಟಕ ಜನತೆಗೆ ಧನ್ಯವಾದಗಳು. ಮೊದಲ ಸಚಿವ ಸಂಪುಟದಲ್ಲಿ ತನ್ನ ಐದು ಗ್ಯಾರಂಟಿ ಯೋಜನೆಗಳಿಗೆ ಅನುಮೋದನೆ ನೀಡಿರುವುದು ಹೆಮ್ಮೆಯ ವಿಚಾರ. ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ, ಪ್ರಗತಿಗಾಗಿ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.