ಸಂಗ್ರಹ ಚಿತ್ರ 
ರಾಜ್ಯ

ಗದಗ: ಜಿಲ್ಲೆಯಲ್ಲಿ ಚಿರತೆ ಪ್ರತ್ಯಕ್ಷ, ಆತಂಕದಲ್ಲಿ ಜನತೆ

ಗದಗ ಜಿಲ್ಲೆಯ ಕಾಲಕಾಲೇಶ್ವರ ಗ್ರಾಮದಲ್ಲಿ ಚಿರತೆಯೊಂದು ಕರುವಿನ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದು, ಈ ಬೆಳವಣಿಗೆಯು ಜನತೆ ಆತಂಕದಲ್ಲಿ ದಿನಕಳೆಯುವಂತೆ ಮಾಡಿದೆ.

ಗದಗ: ಗದಗ ಜಿಲ್ಲೆಯ ಕಾಲಕಾಲೇಶ್ವರ ಗ್ರಾಮದಲ್ಲಿ ಚಿರತೆಯೊಂದು ಕರುವಿನ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದು, ಈ ಬೆಳವಣಿಗೆಯು ಜನತೆ ಆತಂಕದಲ್ಲಿ ದಿನಕಳೆಯುವಂತೆ ಮಾಡಿದೆ.

ಶುಕ್ರವಾರ ಸಂಜೆ ಗ್ರಾಮದ ಹೊರವಲಯದ ಗುಡ್ಡದಲ್ಲಿ ಕರುವಿನ ಕಿರುಚಾಟ ಕೇಳಿದ ಕೆಲ ರೈತರು ದೊಣ್ಣೆಯೊಂದಿಗೆ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಚಿರತೆ ಇರುವುದನ್ನು ಕಂಡು ಭಯಭೀತರಾಗಿದ್ದಾರೆ.

ಬಳಿಕ ಅರಣ್ಯಾಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ಅರಣ್ಯಾಧಿಕಾರಿಗಳು ಗಸ್ತು ತಿರುಗುತ್ತಿದ್ದು, ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಇದೇ ವೇಳೆ ಆತಂಕದಲ್ಲಿರುವ ಗ್ರಾಮಸ್ಥರಿಗೆ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡುತ್ತಿದ್ದಾರೆ.

ನಾಲ್ಕು ತಿಂಗಳ ಹಿಂದೆ ಸಮೀಪದ ಗ್ರಾಮಗಳಲ್ಲಿ ಕೆಲವು ಹಸುಗಳ ಮೇಲೆ ಚಿರತೆಯೊಂದು ದಾಳಿ ನಡೆಸಿತ್ತು. ಬಳಿಕ ಅಧಿಕಾರಿಗಳು ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದರು.

ಇದೀಗ ಮತ್ತೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಗ್ರಾಮದಲ್ಲಿ ಚಿರತೆ ಭೀತಿ ಆವರಿಸಿದೆ.

ಗ್ರಾಮದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಶೀಘ್ರದಲ್ಲೇ ಚಿರತೆಯನ್ನು ಸೆರೆ ಹಿಡಿಯಲಾಗುತ್ತದೆ. ಜನತೆ ವದಂತಿಗಳಿಗೆ ಕಿವಿಗೊಡಬಾರದು. ಆದರೆ, ಹೊರಗೆ ಹೋಗುವಾಗ ಎಚ್ಚರಿಕೆ ವಹಿಸಬೇಕೆಂದು ಅರಣ್ಯಾಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT