ಸಂಗ್ರಹ ಚಿತ್ರ 
ರಾಜ್ಯ

ಗದಗ: ಜಿಲ್ಲೆಯಲ್ಲಿ ಚಿರತೆ ಪ್ರತ್ಯಕ್ಷ, ಆತಂಕದಲ್ಲಿ ಜನತೆ

ಗದಗ ಜಿಲ್ಲೆಯ ಕಾಲಕಾಲೇಶ್ವರ ಗ್ರಾಮದಲ್ಲಿ ಚಿರತೆಯೊಂದು ಕರುವಿನ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದು, ಈ ಬೆಳವಣಿಗೆಯು ಜನತೆ ಆತಂಕದಲ್ಲಿ ದಿನಕಳೆಯುವಂತೆ ಮಾಡಿದೆ.

ಗದಗ: ಗದಗ ಜಿಲ್ಲೆಯ ಕಾಲಕಾಲೇಶ್ವರ ಗ್ರಾಮದಲ್ಲಿ ಚಿರತೆಯೊಂದು ಕರುವಿನ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದು, ಈ ಬೆಳವಣಿಗೆಯು ಜನತೆ ಆತಂಕದಲ್ಲಿ ದಿನಕಳೆಯುವಂತೆ ಮಾಡಿದೆ.

ಶುಕ್ರವಾರ ಸಂಜೆ ಗ್ರಾಮದ ಹೊರವಲಯದ ಗುಡ್ಡದಲ್ಲಿ ಕರುವಿನ ಕಿರುಚಾಟ ಕೇಳಿದ ಕೆಲ ರೈತರು ದೊಣ್ಣೆಯೊಂದಿಗೆ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಚಿರತೆ ಇರುವುದನ್ನು ಕಂಡು ಭಯಭೀತರಾಗಿದ್ದಾರೆ.

ಬಳಿಕ ಅರಣ್ಯಾಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತೆರಳಿದ ಅರಣ್ಯಾಧಿಕಾರಿಗಳು ಗಸ್ತು ತಿರುಗುತ್ತಿದ್ದು, ಚಿರತೆ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಇದೇ ವೇಳೆ ಆತಂಕದಲ್ಲಿರುವ ಗ್ರಾಮಸ್ಥರಿಗೆ ಜಾಗೃತಿ ಮೂಡಿಸುವ ಕೆಲಸವನ್ನೂ ಮಾಡುತ್ತಿದ್ದಾರೆ.

ನಾಲ್ಕು ತಿಂಗಳ ಹಿಂದೆ ಸಮೀಪದ ಗ್ರಾಮಗಳಲ್ಲಿ ಕೆಲವು ಹಸುಗಳ ಮೇಲೆ ಚಿರತೆಯೊಂದು ದಾಳಿ ನಡೆಸಿತ್ತು. ಬಳಿಕ ಅಧಿಕಾರಿಗಳು ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದರು.

ಇದೀಗ ಮತ್ತೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಗ್ರಾಮದಲ್ಲಿ ಚಿರತೆ ಭೀತಿ ಆವರಿಸಿದೆ.

ಗ್ರಾಮದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಶೀಘ್ರದಲ್ಲೇ ಚಿರತೆಯನ್ನು ಸೆರೆ ಹಿಡಿಯಲಾಗುತ್ತದೆ. ಜನತೆ ವದಂತಿಗಳಿಗೆ ಕಿವಿಗೊಡಬಾರದು. ಆದರೆ, ಹೊರಗೆ ಹೋಗುವಾಗ ಎಚ್ಚರಿಕೆ ವಹಿಸಬೇಕೆಂದು ಅರಣ್ಯಾಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT