ಆನೇಕಲ್ ಅಪಘಾತ 
ರಾಜ್ಯ

ಆನೇಕಲ್: ನಂಬರ್ ಬೋರ್ಡ್ ಇಲ್ಲದೆ ಅನುಮಾನಾಸ್ಪದ ಓಡಾಟ; ಹಿಡಿಯಲು ಬಂದ ಪೊಲೀಸರ ಮೇಲೆ ಕಾರು ಹತ್ತಿಸಿದ ದುಷ್ಕರ್ಮಿಗಳು

ಬೆಂಗಳೂರಿನ ಹೊರವಲಯದಲ್ಲಿ ನಂಬರ್ ಬೋರ್ಡ್ ಇಲ್ಲದ ಕಾರನ್ನು ಅನುಮಾನಾಸ್ಪದವಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ದುಷ್ಕರ್ಮಿಗಳ ತಂಡವನ್ನು ಹಿಡಿಯಲು ಪೊಲೀಸರ ಹರಸಾಹಸ ಪಟ್ಟ ಘಟನೆ ನಡೆದಿದೆ.

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ನಂಬರ್ ಬೋರ್ಡ್ ಇಲ್ಲದ ಕಾರನ್ನು ಅನುಮಾನಾಸ್ಪದವಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ ದುಷ್ಕರ್ಮಿಗಳ ತಂಡವನ್ನು ಹಿಡಿಯಲು ಪೊಲೀಸರ ಹರಸಾಹಸ ಪಟ್ಟ ಘಟನೆ ನಡೆದಿದೆ.

ತಮ್ಮನ್ನು ಹಿಡಿಯಲು ಬಂದ ಪೊಲೀಸರ ಬೈಕ್ ಗಳ ಮೇಲೆಯೇ ದುಷ್ಕರ್ಮಿಗಳು ಕಾರು ಚಲಾಯಿಸಿ ಪೊಲೀಸರಿಂದ ತಪ್ಪಿಸಿಕೊಂಡ ಘಟನೆ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ತಮಿಳುನಾಡು ಪೊಲೀಸರ (Tamil Nadu Police) ಕೈಯಿಂದ ತಪ್ಪಿಸಿಕೊಳ್ಳಲು ಮುಂಭಾಗದಲ್ಲಿ ಬಂದ ದ್ವಿಚಕ್ರ ವಾಹನಗಳ ಮೇಲೆ ಕಾರು ಹರಿಸಿ ಎಸ್ಕೇಪ್ ಆಗಿರುವ ಘಟನೆಯ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ಸಿನಿಮಾ ಶೈಲಿಯಲ್ಲಿ ನಡೆದ ಭೀಕರ ಅಪಘಾತಕ್ಕೆ ಇಡೀ ಗ್ರಾಮವೇ ಬೆಚ್ಚಿಬಿದ್ದಿದ್ದು, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಜ್ಯ ಗಡಿ ತಮಿಳುನಾಡಿನ ಜೂಜುವಾಡಿ ಬಳಿ ನಂಬರ್ ಪ್ಲೇಟ್ ಇಲ್ಲದ ಕಾರು ಅನುಮಾನಸ್ಪದವಾಗಿ ಸಂಚರಿಸುತ್ತಿತ್ತು. ಇದನ್ನು ನೋಡಿದ ತಮಿಳುನಾಡು ಪೊಲೀಸರು ಚೇಸ್ ಮಾಡಿದ್ದಾರೆ. ಈ ವೇಳೆ ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಪೋಲೀಸ್ ಠಾಣಾ ವ್ಯಾಪ್ತಿಯ ಬಳ್ಳೂರು ಗ್ರಾಮದಲ್ಲಿ ಮಿನಿ ಬಸ್ ಮತ್ತು ಮಿನಿ ಟೆಂಪೊ ಅಡ್ಡ ಬಂದು ತಪ್ಪಿಸಿಕೊಳ್ಳಲಾಗದೆ ಕಾರು ಸಿಕ್ಕಿಹಾಕಿಕೊಂಡಿತ್ತು. ಈ ವೇಳೆ ಅಡ್ಡಗಟ್ಟಿದ ಪೊಲೀಸರು ವಿಚಾರಣೆಗೆ ಮುಂದಾಗಿದ್ದಾರೆ.

ಪೊಲೀಸರು ಸಮೀಪ ಬರುತ್ತಿದ್ದಂತೆ ಅಡ್ಡಲಾಗಿ ಬರುತ್ತಿದ್ದ ಎರಡು ಮೂರು ದ್ವಿಚಕ್ರ ವಾಹನಗಳ ಮೇಲೆ ಕಿರಾತಕರು ಕಾರು ಚಲಾಯಿಸಿಕೊಂಡು ಎಸ್ಕೇಪ್ ಆಗಿದ್ದಾರೆ. ಒಂದು ದ್ವಿಚಕ್ರ ವಾಹನವನ್ನು ಒಂದಷ್ಟು ದೂರಕ್ಕೆ ಎಳೆದುಕೊಂಡು ಹೋಗಲಾಗಿದೆ. ಈ ಭೀಕರ ದೃಶ್ಯ ಕಂಡ ಗ್ರಾಮಸ್ಥರು ಬಿಚ್ಚಿಬಿದ್ದಿದ್ದಾರೆ. ಘಟನೆ ದೃಶ್ಯಾವಳಿಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದರು ಎನ್ನುವ ಶಂಕೆ ವ್ಯಕ್ತವಾಗಿದೆ.  ಅಪರಾಧ ಕೃತ್ಯ ಎಸಗಿ ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದಾರಾ ಎನ್ನುವ ಬಗ್ಗೆಯೂ ಪೋಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆರೋಪಿಗಳ ಬಂಧನಕ್ಕೆ ತಮಿಳುನಾಡು ಹಾಗೂ ಕರ್ನಾಟಕ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT