ರಾಜ್ಯ

ವಿಧಾನಸಭೆ ಅಧಿವೇಶನ: ಎತ್ತಿನಗಾಡಿಯಲ್ಲಿ ಆಗಮಿಸಿ ಗಮನ ಸೆಳೆದ ನೂತನ ಶಾಸಕ- ವಿಡಿಯೋ

Manjula VN

ಬೆಂಗಳೂರು: ಮೂರು ದಿನಗಳ ವಿಧಾನಸಭೆ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷದ ನೂತನ ಶಾಸಕರು ಎತ್ತಿನ ಗಾಡಿ ಮೂಲಕ ವಿಧಾನಸೌಧಕ್ಕೆ ಆಗಮಿಸಿ, ನೆರೆದಿದ್ದವರ ಗಮನ ಸೆಳೆದರು.

ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಗಾಣಿಗ ಸೇರಿದಂತೆ ಹಲವು ಶಾಸಕರು ವಿಧಾನಸೌಧದ ಕೆಂಗಲ್ ಗೇಟ್ ದ್ವಾರದ ಮುಖ್ಯ ಗೇಟ್ ಮೂಲಕ ಪಶ್ಚಿಮ ದ್ವಾರಕ್ಕೆ ಎತ್ತಿನ ಗಾಡಿಯಲ್ಲಿ ಆಗಮಿಸಿದರು.

ಈ ಹಿಂದೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ನಾಯಕರು ಅಧಿವೇಶನದಲ್ಲಿ ಭಾಗವಹಿಸಲು ಎತ್ತಿನ ಬಂಡಿಯಲ್ಲಿ ವಿಧಾನಸೌಧ ಪ್ರವೇಶಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ವಿಧಾನಸೌಧದ ಮೆಟ್ಟಿಲಿಗೆ ನಮಸ್ಕಾರ ಮಾಡಿದ ನೂತನ ಶಾಸಕಿ ಭಾಗೀರತಿ ಮುರಳ್ಯ ವಿಧಾನಸೌಧ ಪ್ರವೇಶಕ್ಕೆ ಮುಂದಾದರು. ಇದೇ ವೇಳೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದು ನಂತರ ವಿಧಾನಸೌಧ ಪ್ರವೇಶ ಮಾಡಿದರು. ಇವರ ಜೊತೆ ಸದನಕ್ಕೆ ಆಗಮಿಸುತ್ತಿರುವ ನೂತನ ಶಾಸಕರು ಸಹ ಮೆಟ್ಟಿಲಿಗೆ ನಮಸ್ಕಾರ ಮಾಡಿ ವಿಧಾನಸೌಧ ಪ್ರವೇಶ ಮಾಡಿದರು.

SCROLL FOR NEXT