ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಗಾಣಿಗ. 
ರಾಜ್ಯ

ವಿಧಾನಸಭೆ ಅಧಿವೇಶನ: ಎತ್ತಿನಗಾಡಿಯಲ್ಲಿ ಆಗಮಿಸಿ ಗಮನ ಸೆಳೆದ ನೂತನ ಶಾಸಕ- ವಿಡಿಯೋ

ಮೂರು ದಿನಗಳ ವಿಧಾನಸಭೆ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷದ ನೂತನ ಶಾಸಕರು ಎತ್ತಿನ ಗಾಡಿ ಮೂಲಕ ವಿಧಾನಸೌಧಕ್ಕೆ ಆಗಮಿಸಿ, ನೆರೆದಿದ್ದವರ ಗಮನ ಸೆಳೆದರು.

ಬೆಂಗಳೂರು: ಮೂರು ದಿನಗಳ ವಿಧಾನಸಭೆ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷದ ನೂತನ ಶಾಸಕರು ಎತ್ತಿನ ಗಾಡಿ ಮೂಲಕ ವಿಧಾನಸೌಧಕ್ಕೆ ಆಗಮಿಸಿ, ನೆರೆದಿದ್ದವರ ಗಮನ ಸೆಳೆದರು.

ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಗಾಣಿಗ ಸೇರಿದಂತೆ ಹಲವು ಶಾಸಕರು ವಿಧಾನಸೌಧದ ಕೆಂಗಲ್ ಗೇಟ್ ದ್ವಾರದ ಮುಖ್ಯ ಗೇಟ್ ಮೂಲಕ ಪಶ್ಚಿಮ ದ್ವಾರಕ್ಕೆ ಎತ್ತಿನ ಗಾಡಿಯಲ್ಲಿ ಆಗಮಿಸಿದರು.

ಈ ಹಿಂದೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ನಾಯಕರು ಅಧಿವೇಶನದಲ್ಲಿ ಭಾಗವಹಿಸಲು ಎತ್ತಿನ ಬಂಡಿಯಲ್ಲಿ ವಿಧಾನಸೌಧ ಪ್ರವೇಶಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ವಿಧಾನಸೌಧದ ಮೆಟ್ಟಿಲಿಗೆ ನಮಸ್ಕಾರ ಮಾಡಿದ ನೂತನ ಶಾಸಕಿ ಭಾಗೀರತಿ ಮುರಳ್ಯ ವಿಧಾನಸೌಧ ಪ್ರವೇಶಕ್ಕೆ ಮುಂದಾದರು. ಇದೇ ವೇಳೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದು ನಂತರ ವಿಧಾನಸೌಧ ಪ್ರವೇಶ ಮಾಡಿದರು. ಇವರ ಜೊತೆ ಸದನಕ್ಕೆ ಆಗಮಿಸುತ್ತಿರುವ ನೂತನ ಶಾಸಕರು ಸಹ ಮೆಟ್ಟಿಲಿಗೆ ನಮಸ್ಕಾರ ಮಾಡಿ ವಿಧಾನಸೌಧ ಪ್ರವೇಶ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'ಬಸವಣ್ಣನನ್ನೇ ಬಿಡಲಿಲ್ಲ.. ನಾನ್ಯಾರು..'; ‘ಅವರಿಗೆ ಸಚಿವ ಸ್ಥಾನ ಸಿಗದಿರಲು ನಾನು ಕಾರಣ ಅಲ್ಲ’ ಎಂದ ಎಂಬಿ ಪಾಟೀಲ್ ಸ್ಪಷ್ಟನೆ, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!