ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಆಗಮಿಸಿದ ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಗಾಣಿಗ. 
ರಾಜ್ಯ

ವಿಧಾನಸಭೆ ಅಧಿವೇಶನ: ಎತ್ತಿನಗಾಡಿಯಲ್ಲಿ ಆಗಮಿಸಿ ಗಮನ ಸೆಳೆದ ನೂತನ ಶಾಸಕ- ವಿಡಿಯೋ

ಮೂರು ದಿನಗಳ ವಿಧಾನಸಭೆ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷದ ನೂತನ ಶಾಸಕರು ಎತ್ತಿನ ಗಾಡಿ ಮೂಲಕ ವಿಧಾನಸೌಧಕ್ಕೆ ಆಗಮಿಸಿ, ನೆರೆದಿದ್ದವರ ಗಮನ ಸೆಳೆದರು.

ಬೆಂಗಳೂರು: ಮೂರು ದಿನಗಳ ವಿಧಾನಸಭೆ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷದ ನೂತನ ಶಾಸಕರು ಎತ್ತಿನ ಗಾಡಿ ಮೂಲಕ ವಿಧಾನಸೌಧಕ್ಕೆ ಆಗಮಿಸಿ, ನೆರೆದಿದ್ದವರ ಗಮನ ಸೆಳೆದರು.

ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗೌಡ ಗಾಣಿಗ ಸೇರಿದಂತೆ ಹಲವು ಶಾಸಕರು ವಿಧಾನಸೌಧದ ಕೆಂಗಲ್ ಗೇಟ್ ದ್ವಾರದ ಮುಖ್ಯ ಗೇಟ್ ಮೂಲಕ ಪಶ್ಚಿಮ ದ್ವಾರಕ್ಕೆ ಎತ್ತಿನ ಗಾಡಿಯಲ್ಲಿ ಆಗಮಿಸಿದರು.

ಈ ಹಿಂದೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಖಂಡಿಸಿ ಕಾಂಗ್ರೆಸ್ ನಾಯಕರು ಅಧಿವೇಶನದಲ್ಲಿ ಭಾಗವಹಿಸಲು ಎತ್ತಿನ ಬಂಡಿಯಲ್ಲಿ ವಿಧಾನಸೌಧ ಪ್ರವೇಶಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ವಿಧಾನಸೌಧದ ಮೆಟ್ಟಿಲಿಗೆ ನಮಸ್ಕಾರ ಮಾಡಿದ ನೂತನ ಶಾಸಕಿ ಭಾಗೀರತಿ ಮುರಳ್ಯ ವಿಧಾನಸೌಧ ಪ್ರವೇಶಕ್ಕೆ ಮುಂದಾದರು. ಇದೇ ವೇಳೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದು ನಂತರ ವಿಧಾನಸೌಧ ಪ್ರವೇಶ ಮಾಡಿದರು. ಇವರ ಜೊತೆ ಸದನಕ್ಕೆ ಆಗಮಿಸುತ್ತಿರುವ ನೂತನ ಶಾಸಕರು ಸಹ ಮೆಟ್ಟಿಲಿಗೆ ನಮಸ್ಕಾರ ಮಾಡಿ ವಿಧಾನಸೌಧ ಪ್ರವೇಶ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಕುಣಿಗಲ್ ನಿವಾಸಿಗಳ ದಾರುಣ ಸಾವು

ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ: 21 ಕೋಟಿಯಷ್ಟು ಹಣ ಮೃತಪಟ್ಟವರ ಖಾತೆಗೆ ಹೋಗಿದೆ; ಡಿಕೆ ಶಿವಕುಮಾರ್

SCROLL FOR NEXT