ರಾಜ್ಯ

ವಿಧಾನಸಭೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಾಯಕರು ಮುಖಾಮುಖಿ: ಕುಶಲೋಪರಿ ವಿಚಾರಿಸಿದ ಡಿ.ಕೆ.ಶಿವಕುಮಾರ್

Manjula VN

ಬೆಂಗಳೂರು: ಮೂರು ದಿನಗಳ ವಿಧಾನಸಭೆ ವಿಶೇಷ ಅಧಿವೇಸನ ಸೋಮವಾರದಿಂದ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನವಾದ ಇಂದು ಬಿಜೆಪಿ-ಕಾಂಗ್ರೆಸ್ ನಾಯಕರು ವಿಧಾನಸಭೆಯ ಮೊಗಸಾಲೆಯಲ್ಲಿ ಮುಖಾಮುಖಿಯಾಗಿದ್ದಾರೆ. ಎದುರಿಗೆ ಬಂದ ಬಿಜೆಪಿ ನಾಯಕರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಭ ಕೋರಿದ್ದಾರೆ.

ಮಾಜಿ ಸಿಎಂ ಬೊಮ್ಮಾಯಿ, ಬಸವನಗೌಡ ಪಾಟೀಲ್ ಯತ್ನಾಶ್, ಅಶೋಕ್, ರಮೇಶ್ ಜಾರಕಿಹೊಳಿ ಸೇರಿದಂತೆ ಹಲವು ಬಿಜೆಪಿ ನಾಯಕರಿಗೆ ಹ್ಯಾಂಡ್ ಶೇಕ್ ನೀಡುವ ಮೂಲಕ ಡಿ.ಕೆ.ಶಿವಕುಮಾರ್ ಅವರು ಕುಶಲೋಪರಿ ವಿಚಾರಿಸಿದರು.

ರಮೇಶ್ ಜಾರಕಿಹೊಳಿಗೆ ಹೇಗಿದ್ದೀರಿ ಎಂದು ಕೇಳಿ ಕೈಕುಲುಕಿದ್ದಾರೆ. ಅಲ್ಲದೆ, ವಿಪಕ್ಷ ಸದಸ್ಯರ ಜೊತೆಗೆ ನಿಂತು ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಫೋಟೋ ನೋಡಿದ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

SCROLL FOR NEXT