ಸಂಗ್ರಹ ಚಿತ್ರ 
ರಾಜ್ಯ

ಕಾಂಗ್ರೆಸ್ ಗ್ಯಾರಂಟಿ: ನಿರುದ್ಯೋಗ ಭತ್ಯೆ ಜೊತೆಗೆ ಕೌಶಲ್ಯ ತರಬೇತಿಯನ್ನೂ ನೀಡಿ- ಸರ್ಕಾರಕ್ಕೆ ತಜ್ಞರ ಸಲಹೆ

ಯುವಕರಿಗೆ ನಿರುದ್ಯೋಗ ಭತ್ಯೆ ಜೊತೆಗೆ ಕೌಶಲ್ಯ ತರಬೇತಿಯನ್ನೂ ನೀಡುವಂತೆ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ.

ಬೆಂಗಳೂರು: ಯುವಕರಿಗೆ ನಿರುದ್ಯೋಗ ಭತ್ಯೆ ಜೊತೆಗೆ ಕೌಶಲ್ಯ ತರಬೇತಿಯನ್ನೂ ನೀಡುವಂತೆ ಸರ್ಕಾರಕ್ಕೆ ತಜ್ಞರು ಸಲಹೆ ನೀಡಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದು, ಈ ಗ್ಯಾರಂಟಿಗಳಲ್ಲಿ ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3 ಸಾವಿರ ರೂ. ಮತ್ತು ಡಿಪ್ಲೊಮ ಪದವೀಧರರಿಗೆ 1,500 ರೂ. ಮಾಸಿಕ ನಿರುದ್ಯೋಗ ಭತ್ಯೆ ನೀಡುವುದಾಗಿ ಘೋಷಿಸಿತ್ತು.

ಈ ಯೋಜನೆ ಕುರಿತು ಮಾತನಾಡಿರುವ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯ ನಿರ್ದೇಶಕ ಪ್ರೊ.ಡಿ.ರಾಜಶೇಖರ್ ಅವರು, ಯೋಜನೆಯು ನಿರುದ್ಯೋಗಿ ಯುವಕರು ಆತ್ಮವಿಶ್ವಾಸ ಮತ್ತು ಸ್ವಾಭಿಮಾನದಿಂದ ಗೌರವಯುತ ಜೀವನ ನಡೆಸಲು ಉತ್ತಮ ಯೋಜನೆಯಾಗಿದೆ. ಸರ್ಕಾರದ ನಿರುದ್ಯೋಗ ಭತ್ಯೆಯಿಂದ ಆರ್ಥಿಕತೆಗೆ ಸ್ವಲ್ಪಮಟ್ಟಿಗಾದರೂ ಸಹಾಯ ಮಾಡುತ್ತದೆ. ಜರ್ಮನಿ, ಡೆನ್ಮಾರ್ಕ್, ನಾರ್ವೆ ಮತ್ತು ಇತರ ಹಲವು ದೇಶಗಳು ಇಂತಹ ಯೋಜನೆಗಳಿವೆ. ಸರ್ಕಾರ ನಿರುದ್ಯೋಗ ಭತ್ಯೆಯ ಜೊತೆಗೆ ಕೌಶಲ್ಯ ಅಭಿವೃದ್ಧಿ ಕೋರ್ಸ್‌ಗಳ ತರಬೇತಿಯನ್ನೂ ನೀಡುವ ಕೆಲಸ ಮಾಡಬೇಕು. ಇದರಿದ ಸೂಕ್ತವಾದ ಉದ್ಯೋಗಗಳನ್ನು ಹುಡುಕುವಲ್ಲಿ ಅವರಿಗೆ ನೆರವಾಗುತ್ತದೆ ಎಂದು ಹೇಳಿದ್ದಾರೆ.

ನಿರುದ್ಯೋಗ ಭತ್ಯೆಯ ಜೊತೆಗೆ ಕೌಶಲ್ಯ ತರಬೇತಿ ನೀಡುವುದರಿಂದ ಯುವಕರು ಶೀಘ್ರಗತಿಯಲ್ಲಿ ಉದ್ಯೋಗ ಕಂಡುಕೊಳ್ಳಲು ಸಹಾಯವಾಗುತ್ತದೆ. ಇದರಿಂದ ರಾಜ್ಯದ ಬೊಕ್ಕಸಕ್ಕೂ ಹೊರೆಯಾಗುವುದಿಲ್ಲ. ಫಲಾನುಭವಿಗಳು ಭತ್ಯೆಯ ಮೇಲೆ ಅವಲಂಬಿತರಾದರೆ ಉದ್ಯೋಗ ಸಿಗುವವರೆಗೂ ಭತ್ಯೆಯನ್ನು ನೀಡುತ್ತಲೇ ಇರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಇದರ ಜೊತೆಗೆ ಸರ್ಕಾರ ಯೋಜನೆಗೆ ಮೀಸಲಿಡಲಾದ ಹಣ ದುರ್ಬಳಕೆಯಾಗದಂತೆಯೂ ನೋಡಿಕೊಳ್ಳಬೇಕಿದೆ. ಬ್ಯಾಂಕ್ ಖಾತೆಗಳಿಗೆ ಪಾವತಿಗಳನ್ನು ಪತ್ತೆಹಚ್ಚಲು ಈಗಾಗಲೇ ಹಲವಾರು ವ್ಯವಸ್ಥೆಗಳಿವೆ, ಸರ್ಕಾರವು ಅವುಗಳನ್ನು ಪರಿಣಾಮಕಾರಿಯಾಗಿ ಬಳಸಬೇಕು" ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT