ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಧಾರಾಕಾರ ಮಳೆ; ಸಿಡಿಲು ಬಡಿದು ಬಾಲಕ, ಮೈಸೂರಿನಲ್ಲಿ ಮೂವರು ಸೇರಿ ಐವರು ಸಾವು

ರಾಜ್ಯದ ವಿವಿಧೆಡೆ ಭಾನುವಾರ ಭಾರಿ ಮಳೆಯಾಗಿದ್ದು, ತೀವ್ರ ಅವಘಡ ಸಂಭವಿಸಿದೆ. ಬೆಂಗಳೂರಿನ ಕೆಆರ್ ಸರ್ಕಲ್‌ನಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ರಾಜ್ಯದ ವಿವಿಧೆಡೆ ಹಲವು ಮಂದಿ ಮಳೆಯಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.

ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರ ಭಾರಿ ಮಳೆಯಾಗಿದ್ದು, ತೀವ್ರ ಅವಘಡ ಸಂಭವಿಸಿದೆ. ಬೆಂಗಳೂರಿನ ಕೆಆರ್ ಸರ್ಕಲ್‌ನಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ರಾಜ್ಯದ ವಿವಿಧೆಡೆ ಹಲವು ಮಂದಿ ಮಳೆಯಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಹಾಗೂ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ರೈತರು ಮೃತಪಟ್ಟಿದ್ದಾರೆ.

ಹುಣಸೂರು ತಾಲ್ಲೂಕಿನ ಮಂಟಿಕೊಪ್ಪಲು ಗ್ರಾಮದ ಜಮೀನಿನಲ್ಲಿ ಶನಿವಾರ ರಾತ್ರಿ ಸಿಡಿಲು ಬಡಿದು ಗ್ರಾಮದ ನಿವಾಸಿ ಹರೀಶ್ (42) ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಅವರ್ತಿ ಗ್ರಾಮದ ಲೋಕೇಶ್ (55) ಜಮೀನಿನಲ್ಲಿ ಕೆಲಸಮಾಡುತ್ತಿದ್ದಾಗ ಸಿಡಿಲು ಬಡಿದು ಭಾನುವಾರ ಸಂಜೆ ಮೃತಪಟ್ಟಿದ್ದಾರೆ.

ಬೆಟ್ಟದಪುರ ಸಮೀಪದ ಬಾರಸೆ ಗ್ರಾಮದ ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಕೆ. ದೊಡ್ಡಕೊಪ್ಪಲು ಗ್ರಾಮದ ಸ್ವಾಮಿ (18) ಎಂಬುವವರು ಮೃತಪಟ್ಟಿದ್ದಾರೆ. ಜೋರು ಮಳೆ-ಗಾಳಿಯಿಂದಾಗಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಉಳುಮೆ ಮಾಡುವಾಗ ತಂತಿಯನ್ನು ತುಳಿದು ಮೃತಪಟ್ಟಿದ್ದಾರೆ.

ಸಿಡಿಲು ಬಡಿದು ಬಾಲಕ ಸಾವು

ಕೊಪ್ಪಳ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಶ್ರೀಕಾಂತ್ ಮೇಟಿ (16) ಎಂಬುವವರಿಗೆ ಸಿಡಿಲು ಬಡಿದು ಭಾನುವಾರ ಮೃತಪಟ್ಟಿದ್ದಾರೆ.

ಮರ ಬಿದ್ದು ಬೈಕ್ ಸವಾರ ಸಾವು

ಮೂಡಿಗೆರೆ ಬಳಿ ಚಿಕ್ಕಳ್ಳ– ಹಳ್ಳದಗಂಡಿ ಮಾರ್ಗದಲ್ಲಿ ಮಳೆ ಗಾಳಿಗೆ ಮರವೊಂದು ದ್ವಿಚಕ್ರವಾಹನದ ಮೇಲೆ ಬಿದ್ದು ಸವಾರ ವೇಣುಗೋ ಪಾಲ್ (60) ಸಾವಿಗೀಡಾಗಿದ್ದಾರೆ. ಸಂಜೆ ವೇಣುಗೋಪಾಲ್ ಮೂಡಿಗೆರೆಯಿಂದ ಹಳ್ಳದಗುಂಡಿಗೆ ಸಾಗುವಾಗ ಅವಘಡ ಸಂಭವಿಸಿದೆ. ವೇಣುಗೋಪಾಲ್ ಸ್ಥಳದಲ್ಲೇ ಸಾವಿಗೀಡಾಗಿದ್ದು, ವಾಹನ ಜಖಂಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

Nation survey: ಇಂದೇ ಲೋಕಸಭೆ ಚುನಾವಣೆ ನಡೆದರೆ NDA ಎಷ್ಟು ಸ್ಥಾನ ಗೆಲ್ಲುತ್ತೆ ಗೊತ್ತಾ?

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

ಯಾವುದೇ ವ್ಯಕ್ತಿ 75 ವರ್ಷಗಳಿಗೆ ನಿವೃತ್ತಿಯಾಗಬೇಕು ಎಂದು ಎಂದಿಗೂ ಹೇಳಿಲ್ಲ: RSS ಮುಖ್ಯಸ್ಥ Mohan bhagwat ಸ್ಪಷ್ಟನೆ

SCROLL FOR NEXT