ಸಿದ್ದರಾಮಯ್ಯ 
ರಾಜ್ಯ

ಝೀರೋ ಟ್ರಾಫಿಕ್ ಜೊತೆಗೆ ಹಾರ-ತುರಾಯಿ, ಶಾಲಿನ ಸನ್ಮಾನವೂ ಬೇಡವೆಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಗೌರವಾರ್ಥವಾಗಿ ಜನರು ನೀಡುವ ಹೂವುಗಳು ಅಥವಾ ಶಾಲುಗಳಿಗಿಂತ ಪುಸ್ತಕಗಳಿಗೆ ಆದ್ಯತೆ ನೀಡುವುದಾಗಿ ಮೇ 21 ರಂದು ಹೇಳಿದ್ದಾರೆ.

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಗೌರವಾರ್ಥವಾಗಿ ಜನರು ನೀಡುವ ಹೂವುಗಳು ಅಥವಾ ಶಾಲುಗಳಿಗಿಂತ ಪುಸ್ತಕಗಳಿಗೆ ಆದ್ಯತೆ ನೀಡುವುದಾಗಿ ಮೇ 21 ರಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ ಎಂದಿದ್ದಾರೆ.

ಮುಂದುವರಿದು, ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎಂದು ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಅವರು, ಸಾರ್ವಜನಿಕರಿಗೆ ತಮ್ಮಿಂದಾಗುವ ಕಿರಿಕಿರಿ ತಪ್ಪಿಸಲು ಮುಖ್ಯಮಂತ್ರಿ ವಾಹನ ಸಂಚಾರಕ್ಕೆ ನೀಡಿರುವ ಝೀರೋ ಟ್ರಾಫಿಕ್‌ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ಸೂಚಿಸಿದ್ದರು.

ಸಿದ್ದರಾಮಯ್ಯ ಅವರ ಈ ನಡೆ ಮೆಚ್ಚುಗೆಗೆ ಪಾತ್ರವಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಹಲವರು ಉತ್ತಮ ನಿರ್ಧಾರ ಎಂದು ಶ್ವಾಘಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್