ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ 
ರಾಜ್ಯ

ಮಳೆ ಹಾನಿ ಸಂಬಂಧಿತ ದೂರುಗಳನ್ನು ಕೂಡಲೇ ಪರಿಹರಿಸಿ: ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಹಾನಿ ಸಂಬಂಧಿಸಿದ ದೂರುಗಳ ವಿವರವನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್  ಸೂಚಿಸಿದ್ದಾರೆ.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಹಾನಿ ಸಂಬಂಧಿಸಿದ ದೂರುಗಳ ವಿವರವನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.

ಪಾಲಿಕೆ ಕೇಂದ್ರ ಕಚೇರಿಯಯಲ್ಲಿರುವ ನಿಯಂತ್ರಣ ಕೇಂದ್ರಕ್ಕೆ ಭೇಟಿ ನೀಡಿ ಸಹಾಯವಾಣಿ ಮುಖಾಂತರ ಬಂದಿರುವ ವಲಯವಾರು ಮಳೆಹಾನಿ ಸಂಬಂಧಿಸಿದ ದೂರುಗಳನ್ನು ಪರಿಶೀಲಿಸಿದರು. ಇದರಲ್ಲಿ ಸುಮಾರು 70 ದೂರುಗಳು ಬಂದಿದ್ದು, ಮೂರು ದಿನಗಳೊಳಗಾಗಿ ಇವುಗಳನ್ನು ಪರಿಹರಿಸಬೇಕು, ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಶಿಸ್ತು ಕ್ರಮ ವಹಿಸುವುದಾಗಿ ತಿಳಿಸಿದರು.

ವಿಪತ್ತು ನಿರ್ವಹಣೆಗಾಗಿ ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್ ಇಲಾಖೆಯಿಂದ ನೋಡಲ್ ಅಧಿಕಾರಿಯನ್ನು ತಕ್ಷಣವೇ ನೇಮಿಸಲು ಸೂಚಿಸಿದರು. ಮಳೆ ಹಾನಿ ಸಂಬಂಧ ದೂರಿನ ಮಾಹಿತಿ ಹಾಗೂ ತೆಗೆದುಕೊಂಡಿರುವ ಮಾಹಿತಿಯನ್ನು ತಮ್ಮ ಗಮನಕ್ಕೆ ತರಲು ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT