ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ವರುಣನ ರೌದ್ರಾವತಾರ: 3 ಗಂಟೆಗಳಲ್ಲಿ 30 ಎಂಎಂ ಮಳೆ, ರಾಜ್ಯದ ವಿವಿಧೆಡೆ 5 ದಿನ ಮಳೆ ಸಾಧ್ಯತೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಅಲ್ಪಕಾಲ ಬಿರುಗಾಳಿ ಸಹಿತ ಸುರಿದ ರಣಮಳೆ ಭಾರೀ ಅನಾಹುತಗಳನ್ನೇ ಸೃಷ್ಟಿಸಿತು.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಅಲ್ಪಕಾಲ ಬಿರುಗಾಳಿ ಸಹಿತ ಸುರಿದ ರಣಮಳೆ ಭಾರೀ ಅನಾಹುತಗಳನ್ನೇ ಸೃಷ್ಟಿಸಿತು.

ಮಧ್ಯಾಹ್ನ 2.30 ರಿಂದ 5.30 ರವರೆಗೆ ಬೆಂಗಳೂರಿನಲ್ಲಿ 30 ಮಿಮೀ ಮಳೆ ದಾಖಲಾಗಿದೆ. ಈ ವೇಳೆ ಗುಡುಗು, ಮಿಂಚು, ಆಲಿಕಲ್ಲು ಮತ್ತು ಬಲವಾದ ಗಾಳಿ ಬೀಸಿತು.

ಮಳೆಯ ಪರಿಣಾಮ ಮಲ್ಲೇಶ್ವರಂ, ರಾಜಾಜಿನಗರ, ಶಿವಾಜಿನಗರ, ಮೇಕ್ರಿ ಸರ್ಕಲ್, ಹೆಬ್ಬಾಳ, ಯಶವಂತಪುರ, ಬಾಣಸವಾಡಿ, ಮಾಗಡಿ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು ಸೇರಿದಂತೆ ಬೆಂಗಳೂರಿನ ಹಲವೆಡೆ ವಿಶೇಷವಾಗಿ ಉತ್ತರ ಮತ್ತು ಪಶ್ಚಿಮ ಬೆಂಗಳೂರಿನಲ್ಲಿ ಆಲಿಕಲ್ಲುಗಳ ಮಳೆಯಾಯಿತು. ಏಕಾಏಕಿ ಸುರಿದ ಮಳೆಯಿಂದಾಗಿ ನಗರದ ಬಹುತೇಕ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಹಲವೆಡೆ ವಿದ್ಯುತ್ ಕಡಿತಗೊಂಡು ಸಮಸ್ಯೆಗಳು ಸೃಷ್ಟಿಗೊಂಡಿದ್ದವು.

ಬೆಂಗಳೂರು ನಗರದಲ್ಲಿ ಭಾನುವಾರ ಮಧ್ಯಾಹ್ನ ಗುಡುಗು ಸಹಿತ ಮಳೆ ದಾಖಲಾಗಿದ್ದರೆ, ಕೋಲಾರ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಕರ್ನಾಟಕದ ಇತರ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಹವಾಮಾನ ಇಲಾಖೆಯ ಅಂಕಿಅಂಶಗಳ ಪ್ರಕಾರ, ನಗರದಲ್ಲಿ ಸಂಜೆ 5.30 ರವರೆಗೆ 30 ಮಿಮೀ ಮಳೆ ದಾಖಲಾಗಿದ್ದರೆ, ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 25.1 ಮಿಮೀ ಮತ್ತು ಕೆಐಎ 8.6 ಮಿಮೀ ದಾಖಲಾಗಿದೆ.

ರಾತ್ರಿ 8.30ರವರೆಗೆ ನಗರದಲ್ಲಿ 31.4ಮಿ.ಮೀ ಹಾಗೂ ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ 26.5ಮಿ.ಮೀ ಮಳೆ ದಾಖಲಾಗಿದೆ.

ಮಧ್ಯಾಹ್ನ 3.30-4 ಗಂಟೆಯ ವರೆಗೆ ತೀವ್ರ ಮಳೆಯಾಗಿದ್ದು, ನಗರದ ಬಹುತೇಕ ಭಾಗಗಳಲ್ಲಿ 24 ಮಿಮೀ ಮಳೆ ದಾಖಲಾಗಿದೆ.

ಕಳೆದ ವರ್ಷ ಕೂಡ ಮೇ ತಿಂಗಳಿನಲ್ಲಿ ಇದೇ ರೀತಿಯ ಮಳೆಯಾಗಿತ್ತು. ಈ ವರ್ಷ ಕೂಡ ಅದೇ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ನಗರದ ಹಲವೆಡೆ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ. ಡಿಸಿಗಳು ಸೇರಿದಂತೆ ಸರ್ಕಾರಿ ಇಲಾಖೆಗಳ ಅಧಿಕಾರಿಗಳಿಗೆ ಈ ಸಂಬಂಧ ಮಾಹಿತಿ ನೀಡಲಾಗಿದೆ ಎಂದು ಐಎಂಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಂದಿನ ಐದು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಮೊದಲ ಮೂರು ದಿನಗಳಲ್ಲಿ ಭಾರೀ ಮಳೆ ಮತ್ತು ನಾಲ್ಕು ಮತ್ತು ಐದನೇ ದಿನದಲ್ಲಿ ಕ್ರಮೇಣ ಇಳಿಕೆಯಾಗಲಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT