ಪೊಲೀಸ್ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತಿತರರು 
ರಾಜ್ಯ

ಸಾಮಾಜಿಕ ಸಾಮರಸ್ಯ ಕದಡದಂತೆ ಕಟ್ಟೆಚ್ಚರ ವಹಿಸಿ: ಪೊಲೀಸ್ ಅಧಿಕಾರಿಗಳಿಗೆ ಸಿಎಂ, ಡಿಸಿಎಂ ಖಡಕ್ ಸೂಚನೆ

ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್‌ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಹಿರಿಯ ಪೊಲೀಸ್‌ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು ಎಂದರು.

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆ ಕುರಿತು ಪ್ರತ್ಯೇಕ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದ ಮುಖ್ಯಮಂತ್ರಿ, ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯ ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.

ಪೊಲೀಸ್‌ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್‌ ಠಾಣೆಗೆ ಸಮಸ್ಯೆ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು, ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್‌ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್‌ ಮಾಫಿಯಾ ವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಉತ್ತಮವಾಗಿ ಕೆಲಸ ಮಾಡುವವರಿಗೆ ಶಹಬ್ಬಾಶ್‌ಗಿರಿ ನೀಡುತ್ತೇವೆ. ಕರ್ತವ್ಯಲೋಪ ಎಸಗಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಕೆ.ಜೆ. ಜಾರ್ಜ್‌, ಕೆ.ಹೆಚ್. ಮುನಿಯಪ್ಪ, ಬಿ.ಝಡ್. ಜಮೀರ್‌ ಅಹ್ಮದ್‌ ಖಾನ್‌, ಎಂ.ಪಿ. ಪಾಟೀಲ್‌, ಸತೀಶ್‌ ಜಾರಕಿಹೊಳಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ