ಡಿಸಿ, ಸಿಇಒಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ 
ರಾಜ್ಯ

ಮುಂಗಾರು ಪೂರ್ವ ಮಳೆಯಿಂದ ಹಾನಿ: ಬೆಳೆ ರಕ್ಷಣೆಗೆ ಮುಂಜಾಗ್ರತಾ ಕ್ರಮ ವಹಿಸಿ; ಡಿಸಿ, ಸಿಇಒಗಳಿಗೆ ಮುಖ್ಯಮಂತ್ರಿ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ನಡೆಸಿ, ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

ರಾಜ್ಯದಲ್ಲಿ ಜೂನ್ ನಲ್ಲಿ ಮುಂಗಾರು ಮಳೆ ಆರಂಭವಾಗಲಿದ್ದು, ಏಪ್ರಿಲ್‌ ತಿಂಗಳಿನಲ್ಲಿಯೇ ಮುಂಗಾರು ಪೂರ್ವ ಗಾಳಿ ಮಳೆಯಿಂದ ಮರಗಳು ಬಿದ್ದು ಹೋಗಿವೆ. ಸಿಡಿಲು, ಆಲಿಕಲ್ಲು ಮಳೆಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇಂತಹ ಅನಾಹುತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಯಿತು.

ಜಿಲ್ಲಾಧಿಕಾರಿಗಳ ಬಳಿಯೇ ಅನುದಾನ ಲಭ್ಯವಿದೆ. ಅಗತ್ಯವಿದ್ದರೆ, ಕೇಳಬೇಕು. ಪರಿಹಾರ ಕ್ರಮ ಕೈಗೊಳ್ಳಲು ತೊಂದರೆ ಇಲ್ಲ. ಕೃಷಿ ಅಧಿಕಾರಿಗಳು ಬಿತ್ತನೆ ಚಟುವಟಿಕೆಗೆ ಅಗತ್ಯವಿರುವ ಬೀಜ, ಗೊಬ್ಬರ, ಕೀಟನಾಶಕಗಳನ್ನು ಒದಗಿಸಬೇಕು. ಹಾವೇರಿ ಗೋಲಿಬಾರಿನಂತಹ ಘಟನೆ ಮರುಕಳಿಸಬಾರದು. ಮಳೆಯಿಂದ ಮರಗಳು, ವಿದ್ಯುತ್ ಕಂಬಗಳು ಧರೆಗುರಳಿ ಬಿದ್ದರೆ ಕೂಡಲೇ ಅವುಗಳನ್ನು ತೆರವು ಗೊಳಿಸಬೇಕು. ಟ್ರಾನ್‌ಫಾರ್ಮರ್‌, ಸೇತುವೆ ಹಾಳಾಗಿದ್ದರೆ, ಶಾಲಾ ಕೊಠಡಿಗಳು ಶಿಥಿಲ ಆಗಿದ್ದರೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮುನ್ನೆಚ್ಚರಿಕೆ ತೆಗೆದುಕೊಂಡರೆ ಅನಾಹುತ ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದರು. 

ಕಚೇರಿಯಲ್ಲೇ ಕುಳಿತು ಕೆಲಸ ಮಾಡಿದರೆ ಆಗದು. ಫೀಲ್ಡ್‌ ಗೆ ಹೋಗಬೇಕು. ಕುಳಿತಲ್ಲೇ ಕುಳಿತು ಪರಿಣಾಮಕಾರಿಯಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದು. ಅದಕ್ಕೇ ಮುಂಚಿತವಾಗಿ ಸಭೆ ಕರೆಯಲಾಗಿದೆ. ಯಾವುದೇ ಕಾರಣಕ್ಕೆ ಕರ್ತವ್ಯ ಲೋಪ ಆಗಬಾರದು. ಬೇಜವಾಬ್ದಾರಿತನದಿಂದ ಅನಾಹುತಗಳಾದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು. ನೆಪ ಹೇಳಿಕೊಂಡು ಪರಿಹಾರ ಕ್ರಮ ವಿಳಂಬ ಮಾಡುವುದು ಸರಿಯಲ್ಲ. ಯಾವುದೇ ಕಾರಣಕ್ಕೆ ಲೋಪ ಆಗಬಾರದು. ಒಂದು ವೇಳೆ ಲೋಪ ಎಸಗಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜನ ಸರ್ಕಾರದಿಂದ ಬದಲಾವಣೆ ಬಯಸಿದ್ದಾರೆ. ಸರ್ಕಾರಕ್ಕೆ ಹೊಸ ಇಮೇಜ್‌ ಕೊಡಲೇಬೇಕು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರ ಬಂದಿದೆ ಎಂಬ ಸಂದೇಶ ಹೋಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. 

ಜಿಲ್ಲಾಧಿಕಾರಿಗಳು, ಸಿಇಒ ಗಳದ್ದು ಜವಾಬ್ದಾರಿಯುತ ಸ್ಥಾನ. ಜೊತೆಗೆ ಪೊಲೀಸ್‌ ವರಿಷ್ಠಾಧಿಕಾರಿಗಳ ಹೊಣೆಯೂ ಪ್ರಮುಖವಾದದ್ದು. ಕರ್ನಾಟಕದ ಜನತೆ ಬದಲಾವಣೆ ಬಯಸಿದ್ದಾರೆ. ಆಲಸ್ಯ ಬಿಟ್ಟು ಕೆಲಸ ಮಾಡಿ. ಬಹಳ ಜನ ಜಿಲ್ಲಾಧಿಕಾರಿಗಳು ತಾಲ್ಲೂಕುಗಳಿಗೆ ಭೇಟಿ ನೀಡಿರುವುದಿಲ್ಲ. ಇನ್ನು ಮುಂದೆ ಇಂತಹುದಕ್ಕೆ ಅವಕಾಶವಿಲ್ಲ. ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಕ್ಷೇತ್ರ ಭೇಟಿ ಮಾಡಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು. 

ಕಳೆದ ಕೆಲವು ವರ್ಷಗಳಿಂದ ಪ್ರವಾಹ ನೋಡುತ್ತಾ ಇದ್ದೀರಿ. ಹವಾಮಾನ ಇಲಾಖೆ ಸಂಪರ್ಕ- ಮುನ್ಸೂಚನೆ ಅರಿತು ಕೆಲಸ ಮಾಡಿ. ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಸಲಕರಣೆಗಳನ್ನು ಸಿದ್ಧಪಡಿಸಿಟ್ಟುಕೊಳ್ಳಿ. ಪ್ರವಾಹ ಬರುವ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ. ಬೆಳೆಹಾನಿ ಮಾಹಿತಿ ಇರಬೇಕು. ಅನುದಾನ ಅಗತ್ಯವಿದ್ದಲ್ಲಿ ಮನವಿ ಸಲ್ಲಿಸಿ ಬಿಡುಗಡೆ ಮಾಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ