ಕೆಸಿ ನಾರಾಯಣ ಗೌಡ 
ರಾಜ್ಯ

ಮತದಾರರಿಗೆ ಹಣ ಹಂಚದಿರುವುದೇ ಸೋಲಿಗೆ ಕಾರಣ, ಹಣ ವಾಪಸ್‌ ಕೊಡಿ: ಬಿಜೆಪಿ ನಾಯಕ ಕೆಸಿ ನಾರಾಯಣಗೌಡ

ಬಿಜೆಪಿ ಮುಖಂಡ ಹಾಗೂ ಮಾಜಿ ಕ್ರೀಡಾ ಸಚಿವ ಕೆಸಿ ನಾರಾಯಣಗೌಡ ಸೋಮವಾರ ಮತ್ತೊಂದು ವಿವಾದಕ್ಕೆ ಸಿಲುಕಿದ್ದು, ಚುನಾವಣೆ ವೇಳೆ ಮತದಾರರಿಗೆ ಹಣ ಹಂಚಲು ಪಕ್ಷದ ಸ್ಥಳೀಯ ಮುಖಂಡರು ಹಾಗೂ ಬೆಂಬಲಿಗರು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಮೈಸೂರು: ಬಿಜೆಪಿ ಮುಖಂಡ ಹಾಗೂ ಮಾಜಿ ಕ್ರೀಡಾ ಸಚಿವ ಕೆಸಿ ನಾರಾಯಣಗೌಡ ಸೋಮವಾರ ಮತ್ತೊಂದು ವಿವಾದಕ್ಕೆ ಸಿಲುಕಿದ್ದು, ಚುನಾವಣೆ ವೇಳೆ ಮತದಾರರಿಗೆ ಹಣ ಹಂಚಲು ಪಕ್ಷದ ಸ್ಥಳೀಯ ಮುಖಂಡರು ಹಾಗೂ ಬೆಂಬಲಿಗರು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಕೆಆರ್ ಪೇಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿರುದ್ಧ ನಾರಾಯಣ ಗೌಡ ಅವರು ಸೋಲು ಅನುಭವಿಸಿದ್ದರು. ಹೀಗಾಗಿ, ಹಣವನ್ನು ಹಿಂದಿರುಗಿಸುವಂತೆ ಸ್ಥಳೀಯ ಮುಖಂಡರನ್ನು ಕೋರಿದ್ದಾರೆ. 'ಮತದಾರರಿಗೆ ಹಣವನ್ನು ವಿತರಿಸದ ಮತ್ತು ಅದನ್ನು ತಮ್ಮ ಬಳಿ ಇಟ್ಟುಕೊಂಡಿರುವವರು ಹಣವನ್ನು ಹಿಂದಿರುಗಿಸಬೇಕು. ಅದನ್ನು ಕಲ್ಯಾಣ ಕಾರ್ಯಕ್ರಮಗಳಿಗೆ ಬಳಸಿಕೊಳ್ಳುತ್ತೇನೆ' ಎಂದರು.

ಮಂಡ್ಯದಲ್ಲಿ ಸೋಮವಾರ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ನನ್ನ ಆಪ್ತರು ಮತದಾರರಿಗೆ ಹಣ ಹಂಚದೆ ವಂಚಿಸಿದ್ದಾರೆ. ಇದು ನನ್ನ ಹೀನಾಯ ಸೋಲಿಗೆ ಕಾರಣವಾಯಿತು. ಹಣ ಹಂಚಿರುವ ಬೆಂಬಲಿಗರ ಪಟ್ಟಿ ನನ್ನ ಬಳಿ ಇದೆ' ಎಂದಿದ್ದಾರೆ.
ನನ್ನ ಮಾಹಿತಿ ಪ್ರಕಾರ, ಕ್ಷೇತ್ರದ ಹಲವು ಗ್ರಾಮಗಳ ಮತದಾರರಿಗೆ ಹಣ ತಲುಪಿಲ್ಲ ಎಂದರು. 

ನಾರಾಯಣ ಗೌಡ ಅವರು ಆಪರೇಷನ್ ಕಮಲದ ವೇಳೆ ಬಿಜೆಪಿಗೆ ಪಕ್ಷಾಂತರಗೊಂಡು ಬಿಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT