ಹಲ್ಲೆ ದೃಶ್ಯ 
ರಾಜ್ಯ

ಕೊಪ್ಪಳ: ಕರೆಂಟ್ ಬಿಲ್ ಕಟ್ಟಲ್ಲ ಎಂದು ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ವ್ಯಕ್ತಿ, ವಿಡಿಯೋ ವೈರಲ್!

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಇದೀಗ ರಾಜ್ಯದಲ್ಲಿ ನಾವು ಬಸ್ ಟಿಕೆಟ್ ತಗೋಳಲ್ಲ, ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಜನರು ಹೇಳುತ್ತಿದ್ದಾರೆ. ಅದರಂತೆ ಕೊಪ್ಪಳದಲ್ಲಿ ವ್ಯಕ್ತಿಯೋರ್ವ ಕರೆಂಟ್ ಬಿಲ್ ಕಟ್ಟು ಎಂದು ಹೇಳಿದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. 

ಕೊಪ್ಪಳ: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಇದೀಗ ರಾಜ್ಯದಲ್ಲಿ ನಾವು ಬಸ್ ಟಿಕೆಟ್ ತಗೋಳಲ್ಲ, ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಜನರು ಹೇಳುತ್ತಿದ್ದಾರೆ. ಅದರಂತೆ ಕೊಪ್ಪಳದಲ್ಲಿ ವ್ಯಕ್ತಿಯೋರ್ವ ಕರೆಂಟ್ ಬಿಲ್ ಕಟ್ಟು ಎಂದು ಹೇಳಿದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. 

ಕೊಪ್ಪಳದ ಕೂಕನಪಳ್ಳಿ ಗ್ರಾಮದ ಚಂದ್ರಶೇಖರಯ್ಯ ಹಿರೇಮಠ ಎಂಬಾತ ಕರೆಂಟ್ ಬಿಲ್ ಕಟ್ಟುವಂತೆ ಹೇಳಿದ ಜೆಸ್ಕಾಂ ಸಿಬ್ಬಂದಿ ಮಂಜುನಾಥ್ ಎಂಬುವರಿಗೆ ಕಪಾಳಮೋಕ್ಷ ಮಾಡಿದ್ದು ಅಲ್ಲದೆ ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ಇದೀಗ ವೈರಲ್ ಆಗಿದೆ. 

ಈ ಸಂಬಂಧ ಜೆಸ್ಕಾಂ ಸಿಬ್ಬಂದಿ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರು ಚಂದ್ರಶೇಖರಯ್ಯ ಹಿರೇಮಠ ಎಂಬಾತನನ್ನು ಬಂಧಿಸಿದ್ದಾರೆ. 

ಚಂದ್ರಶೇಖರಯ್ಯ ಹಿರೇಮಠ ಸುಮಾರು 9,990 ರೂಪಾಯಿಯಷ್ಟು ವಿದ್ಯುತ್ ಬಿಲ್ ಅನ್ನು ಬಾಕಿ ಉಳಿಸಿಕೊಂಡಿದ್ದರು. ಬಿಲ್ ಕಟ್ಟುವಂತೆ ಹೇಳಿದರೂ ಬಿಲ್ ಕಟ್ಟದಿದ್ದಾಗ ಮನೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿತ್ತು. ಇದರಿಂದ ಕೆರಳಿದ ಚಂದ್ರಶೇಖರಯ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!