ಹಲ್ಲೆ ದೃಶ್ಯ 
ರಾಜ್ಯ

ಕೊಪ್ಪಳ: ಕರೆಂಟ್ ಬಿಲ್ ಕಟ್ಟಲ್ಲ ಎಂದು ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ವ್ಯಕ್ತಿ, ವಿಡಿಯೋ ವೈರಲ್!

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಇದೀಗ ರಾಜ್ಯದಲ್ಲಿ ನಾವು ಬಸ್ ಟಿಕೆಟ್ ತಗೋಳಲ್ಲ, ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಜನರು ಹೇಳುತ್ತಿದ್ದಾರೆ. ಅದರಂತೆ ಕೊಪ್ಪಳದಲ್ಲಿ ವ್ಯಕ್ತಿಯೋರ್ವ ಕರೆಂಟ್ ಬಿಲ್ ಕಟ್ಟು ಎಂದು ಹೇಳಿದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. 

ಕೊಪ್ಪಳ: ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಇದೀಗ ರಾಜ್ಯದಲ್ಲಿ ನಾವು ಬಸ್ ಟಿಕೆಟ್ ತಗೋಳಲ್ಲ, ಕರೆಂಟ್ ಬಿಲ್ ಕಟ್ಟುವುದಿಲ್ಲ ಎಂದು ಜನರು ಹೇಳುತ್ತಿದ್ದಾರೆ. ಅದರಂತೆ ಕೊಪ್ಪಳದಲ್ಲಿ ವ್ಯಕ್ತಿಯೋರ್ವ ಕರೆಂಟ್ ಬಿಲ್ ಕಟ್ಟು ಎಂದು ಹೇಳಿದ ಜೆಸ್ಕಾಂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. 

ಕೊಪ್ಪಳದ ಕೂಕನಪಳ್ಳಿ ಗ್ರಾಮದ ಚಂದ್ರಶೇಖರಯ್ಯ ಹಿರೇಮಠ ಎಂಬಾತ ಕರೆಂಟ್ ಬಿಲ್ ಕಟ್ಟುವಂತೆ ಹೇಳಿದ ಜೆಸ್ಕಾಂ ಸಿಬ್ಬಂದಿ ಮಂಜುನಾಥ್ ಎಂಬುವರಿಗೆ ಕಪಾಳಮೋಕ್ಷ ಮಾಡಿದ್ದು ಅಲ್ಲದೆ ಚಪ್ಪಲಿಯಿಂದ ಹೊಡೆದಿರುವ ವಿಡಿಯೋ ಇದೀಗ ವೈರಲ್ ಆಗಿದೆ. 

ಈ ಸಂಬಂಧ ಜೆಸ್ಕಾಂ ಸಿಬ್ಬಂದಿ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರು ಚಂದ್ರಶೇಖರಯ್ಯ ಹಿರೇಮಠ ಎಂಬಾತನನ್ನು ಬಂಧಿಸಿದ್ದಾರೆ. 

ಚಂದ್ರಶೇಖರಯ್ಯ ಹಿರೇಮಠ ಸುಮಾರು 9,990 ರೂಪಾಯಿಯಷ್ಟು ವಿದ್ಯುತ್ ಬಿಲ್ ಅನ್ನು ಬಾಕಿ ಉಳಿಸಿಕೊಂಡಿದ್ದರು. ಬಿಲ್ ಕಟ್ಟುವಂತೆ ಹೇಳಿದರೂ ಬಿಲ್ ಕಟ್ಟದಿದ್ದಾಗ ಮನೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿತ್ತು. ಇದರಿಂದ ಕೆರಳಿದ ಚಂದ್ರಶೇಖರಯ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT