ಎಚ್.ಡಿ ಕುಮಾರಸ್ವಾಮಿ 
ರಾಜ್ಯ

ಮಂಗಳವಾರ ಅಶುಭ: ಎಚ್‌ಡಿ ಕುಮಾರಸ್ವಾಮಿ ಸೇರಿ 9 ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರಕ್ಕೆ ಗೈರು

ಮೇ 22ರಿಂದ ಆರಂಭವಾದ ನೂತನ ಸರ್ಕಾರದ ಮೂರು ದಿನಗಳ ಮೊದಲ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ನೂತನ ಶಾಸಕರು, ಸಚಿವರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಆದರೆ, ಮಂಗಳವಾರ ಅಶುಭ ಎಂದು ಪರಿಗಣಿಸಿದ ಒಂಬತ್ತು ಶಾಸಕರು ಮಂಗಳವಾರ ಪ್ರಮಾಣ ವಚನ ಸ್ವೀಕಾರದ ಕಲಾಪಕ್ಕೆ ಗೈರಾಗಿದ್ದರು. 

ಬೆಂಗಳೂರು: ಮೇ 22ರಿಂದ ಆರಂಭವಾದ ನೂತನ ಸರ್ಕಾರದ ಮೂರು ದಿನಗಳ ಮೊದಲ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ನೂತನ ಶಾಸಕರು, ಸಚಿವರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಆದರೆ, ಮಂಗಳವಾರ ಅಶುಭ ಎಂದು ಪರಿಗಣಿಸಿದ ಒಂಬತ್ತು ಶಾಸಕರು ಮಂಗಳವಾರ ಪ್ರಮಾಣ ವಚನ ಸ್ವೀಕಾರದ ಕಲಾಪಕ್ಕೆ ಗೈರಾಗಿದ್ದರು. 

ಹೀಗೆ ಗೈರಾದ ಶಾಸಕರಲ್ಲಿ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಎಚ್‌ಡಿ ರೇವಣ್ಣ ಸೇರಿದಂತೆ ಜೆಡಿಎಸ್‌ನ ಕೆಲವು ಶಾಸಕರು ಸೇರಿದ್ದಾರೆ. ಆದರೆ, ಕಾಂಗ್ರೆಸ್‌ನ ಮಧು ಬಂಗಾರಪ್ಪ, ಪ್ರಿಯಾ ಕೃಷ್ಣ ಸೇರಿದಂತೆ ಏಳು ಶಾಸಕರು ಸ್ಪೀಕರ್ ಕಚೇರಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬುಧವಾರ ನಡೆಯಲಿರುವ ಸ್ಪೀಕರ್ ಚುನಾವಣೆಯಲ್ಲಿ ಪ್ರಮಾಣ ವಚನ ಸ್ವೀಕರಿಸದ ಶಾಸಕರಿಗೆ ಮತದಾನ ಮಾಡಲು ಅವಕಾಶವಿಲ್ಲ.

ಇದೇ ವೇಳೆ ಶಿಕಾರಿಪುರ ಕ್ಷೇತ್ರದಿಂದ ಪ್ರಥಮ ಬಾರಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಕ್ಷೇತ್ರದ ಆರಾಧ್ಯ ದೈವ ಹುಚ್ಚುರಾಯ ಸ್ವಾಮಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಬಿಜೆಪಿಯ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಗೋಮಾತೆ ಹಾಗೂ ವಿಬುಧೇಶ ತೀರ್ಥ ಸ್ವಾಮೀಜಿ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

16ನೇ ವಿಧಾನಸಭೆ ಅಧಿವೇಶನದ ಎರಡನೇ ದಿನ 43 ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?