ಪ್ರಾತಿನಿಧಿಕ ಚಿತ್ರ 
ರಾಜ್ಯ

ಪಿಜಿ ವಸತಿ ಗೃಹದ ಮಾಲೀಕರನ್ನು ಗುರಿಯಾಗಿಸಿ ದರೋಡೆ ಮಾಡುತ್ತಿದ್ದ ಇಬ್ಬರು ಎಂಜಿನಿಯರ್‌ಗಳು, ವಕೀಲರ ಬಂಧನ

ಕುಮಾರಸ್ವಾಮಿ ಲೇಔಟ್ ಪೊಲೀಸರು ದರೋಡೆ ಆರೋಪದ ಮೇಲೆ ವಕೀಲ ಹಾಗೂ ಇಬ್ಬರು ಇಂಜಿನಿಯರಿಂಗ್ ಪದವೀಧರರನ್ನು ಬಂಧಿಸಿದ್ದಾರೆ. ಸ್ವರೂಪ್ (27), ಆತ್ಮಾನಂದ ಜಂಬಗಿ (27) ಮತ್ತು ಶಾಲಿಂ ರಾಜ್ (21) ಪೇಯಿಂಗ್ ಗೆಸ್ಟ್ (ಪಿಜಿ) ವಸತಿಗೃಹದಲ್ಲಿ ವಾಸವಿದ್ದು, ಪಿಜಿ ವಸತಿಗೃಹ ಮಾಲೀಕರನ್ನು ಗುರಿಯಾಗಿಸಿಕೊಂಡು ದರೋಡೆ ನಡೆಸುತ್ತಿದ್ದರು.

ಬೆಂಗಳೂರು: ಕುಮಾರಸ್ವಾಮಿ ಲೇಔಟ್ ಪೊಲೀಸರು ದರೋಡೆ ಆರೋಪದ ಮೇಲೆ ವಕೀಲ ಹಾಗೂ ಇಬ್ಬರು ಇಂಜಿನಿಯರಿಂಗ್ ಪದವೀಧರರನ್ನು ಬಂಧಿಸಿದ್ದಾರೆ. 

ಸ್ವರೂಪ್ (27), ಆತ್ಮಾನಂದ ಜಂಬಗಿ (27) ಮತ್ತು ಶಾಲಿಂ ರಾಜ್ (21) ಪೇಯಿಂಗ್ ಗೆಸ್ಟ್ (ಪಿಜಿ) ವಸತಿಗೃಹದಲ್ಲಿ ವಾಸವಿದ್ದು, ಪಿಜಿ ವಸತಿಗೃಹ ಮಾಲೀಕರನ್ನು ಗುರಿಯಾಗಿಸಿಕೊಂಡು ದರೋಡೆ ನಡೆಸುತ್ತಿದ್ದರು.

ಈ ಮೂವರು, ಅವರ ವ್ಯಾಪಾರವನ್ನು ವಿಸ್ತರಿಸಲು ಕಟ್ಟಡವನ್ನು ಹುಡುಕಲು ಸಹಾಯ ಮಾಡುವ ನೆಪದಲ್ಲಿ ಆ ಪ್ರದೇಶದಲ್ಲಿನ ಪಿಜಿ ವಸತಿ ಮಾಲೀಕರಿಗೆ ಕರೆ ಮಾಡುತ್ತಿದ್ದರು. ಬಳಿಕ ನಿರ್ಮಾಣ ಹಂತದ ಕಟ್ಟಡಗಳಿಗೆ ಮಾಲೀಕರನ್ನು ಆಹ್ವಾನಿಸುತ್ತಿದ್ದರು. ಪಾರ್ಶ್ವವಾಯುವಿಗೆ ಕಾರಣವಾಗುವಂತಹ ರಾಸಾಯನಿಕಗಳನ್ನು ಅವರ ದೇಹಕ್ಕೆ ಚುಚ್ಚುವುದಾಗಿ ಬೆದರಿಕೆ ಹಾಕುತ್ತಿದ್ದರು. ಭಯದಿಂದ ಮಾಲೀಕರು ತಮ್ಮ ಬಳಿ ಇದ್ದ ಮೊಬೈಲ್, ಚಿನ್ನಾಭರಣ, ನಗದನ್ನು ಅವರಿಗೆ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅವರಿಗೆ ಪರಿಚಯವಿರುವ ಜನರ ಮನೆಗಳನ್ನು ಸಹ ಅವರು ಗುರಿಯಾಗಿಸಿಕೊಂಡಿದ್ದಾರೆ. ಈ ಮೂವರು ತಾವು ಟಾರ್ಗೆಟ್ ಮಾಡಲಿರುವ ಮನೆಯಲ್ಲಿರುವ ಜನರ ದೈನಂದಿನ ಚಟುವಟಿಕೆಗಳನ್ನು ತಿಳಿದುಕೊಳ್ಳುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.

ಇತ್ತೀಚೆಗೆ ವೀಸಾ ದಾಖಲೆಗಳನ್ನು ಪರಿಶೀಲಿಸುವ ನೆಪದಲ್ಲಿ ಸಿವಿಲ್ ಗುತ್ತಿಗೆದಾರ ಮುರಳೀಧರ್ ಮನೆಗೆ ಹೋಗಿದ್ದರು. ಕಳ್ಳತನಕ್ಕಾಗಿ ಮನೆ ಪ್ರವೇಶಿಸುವ ಮುನ್ನ ಮುರಳೀಧರ್ ಮನೆಯಲ್ಲಿ ಒಬ್ಬರೇ ಇದ್ದುದನ್ನು ಖಚಿತಪಡಿಸಿಕೊಂಡಿದ್ದಾರೆ. ಮುಖಕ್ಕೆ ಮಾಸ್ಕ್ ಧರಿಸಿ, ತಮ್ಮ ಗುರುತನ್ನು ಮರೆಮಾಚಿ, ಗುತ್ತಿಗೆದಾರನನ್ನು ಕಟ್ಟಿಹಾಕಿ 15 ಲಕ್ಷ ರೂಪಾಯಿ ಮೌಲ್ಯದ ನಗದು, ಚಿನ್ನ ಮತ್ತು ಆಭರಣಗಳನ್ನು ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಗುತ್ತಿಗೆದಾರರು ನೀಡಿದ ದೂರಿನ ಮೇರೆಗೆ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT