ಸಂಗ್ರಹ ಚಿತ್ರ 
ರಾಜ್ಯ

ಇಂದಿರಾ ಕ್ಯಾಂಟೀನ್ ಗಳಿಗೆ ಮರುಜೀವ ನೀಡಲು ಬಿಬಿಎಂಪಿ ಮುಂದು!

ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದಿದ್ದು, ಇದರ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್'ಗಳಿಗೆ ಮರುಜೀವ ನೀಡಲು ಬಿಬಿಎಂಪಿ ಭರದ ಸಿದ್ಧತೆಗಳನ್ನು ನಡೆಸುತ್ತಿದೆ.

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದಿದ್ದು, ಇದರ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್'ಗಳಿಗೆ ಮರುಜೀವ ನೀಡಲು ಬಿಬಿಎಂಪಿ ಭರದ ಸಿದ್ಧತೆಗಳನ್ನು ನಡೆಸುತ್ತಿದೆ.

ಇಂದಿರಾ ಕ್ಯಾಂಟೀನ್‌ಗಳ ಅಡುಗೆ ಕೋಣೆಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಮತ್ತು ಮರು ಸಜ್ಜುಗೊಳಿಸಲು ಪಾಲಿಕೆ ಚಿಂತನೆ ನಡೆಸುತ್ತಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಮೊಬೈಲ್ ಕ್ಯಾಂಟೀನ್‌ಗಳನ್ನು ಮರು ಆರಂಭಿಸುವ ಮತ್ತು ಆಹಾರದ ಗುಣಮಟ್ಟವನ್ನು ಸುಧಾರಿಸುವ ಬಗ್ಗೆ ಶೀಘ್ರದಲ್ಲೇ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು) ಜಯರಾಮ ರಾಯಪುರ ಮಾತನಾಡಿ, ‘ಇಂದಿರಾ ಕ್ಯಾಂಟೀನ್ ಸೌಲಭ್ಯವನ್ನು ಎಲ್ಲ 243 ವಾರ್ಡ್ ಗಳಿಗೂ ವಿಸ್ತರಿಸಬೇಕು, ಜೊತೆಗೆ ಗುಣಮಟ್ಟದ ಉಪಹಾರ ನೀಡಿ ಅದರ ಪ್ರಮಾಣ ಹೆಚ್ಚಿಸಬೇಕು’ ಎಂದರು.

ಪಾಲಿಕೆ ಕ್ಯಾಂಟೀನ್‌ಗಳಿಗೆ ಮರು ಟೆಂಡರ್ ಪ್ರಕ್ರಿಯೆ ಆರಂಭಿಸಲಿದೆ ಎಂದು ಇದೇ ವೇಳೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT