ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಜಿಗಿದು ಮೊಹಮ್ಮದ್ ಸಾವು; ಪ್ರಕರಣ ಸಿಐಡಿಗೆ ವರ್ಗಾವಣೆ

ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಯುವಕ ಮೃತಪಟ್ಟಿದ್ದ ಪ್ರಕರಣದ ತನಿಖೆ ಮಾಡಲು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು: ಪೊಲೀಸರಿಂದ ತಪ್ಪಿಸಿಕೊಳ್ಳಲು ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಯುವಕ ಮೃತಪಟ್ಟಿದ್ದ ಪ್ರಕರಣದ ತನಿಖೆ ಮಾಡಲು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. 

ಪ್ರಕರಣ ಸಂಬಂಧ ವಿಚಾರಣೆ ನಡೆಸಲು ಪೊಲೀಸರು ಆರೋಪಿ ಬೆಂಗಳೂರಿನ ಬೇಗೂರು ರಸ್ತೆಯಲ್ಲಿ ನೆಲೆಸಿದ್ದ ಮೊಹಮ್ಮದ್ ಹುಸೇನ್ ಮನೆಗೆ ತೆರಳಿದ್ದರು. ಆದರೆ ಈ ವೇಳೆ ಮೊಹಮ್ಮದ್ ಕಟ್ಟಡದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದನು. ಇದೀಗ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ. 

ಪೊಲೀಸರೇ ತನ್ನ ಮಗನನ್ನು ಕಟ್ಟಡದಿಂದ ತಳ್ಳಿ ಹತ್ಯೆ ಮಾಡಿದ್ದಾರೆ ಎಂದು ಮೃತ ಯುವಕನ ಪೋಷಕರು ಆರೋಪಿಸಿದ್ದಾರೆ. ಈ ಹಿನ್ನಲೆ ಸಂಕ್ಷಿಪ್ತವಾದ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ಸ್ಥಳೀಯ ಯುವತಿಗೆ ಬೆದರಿಕೆ ಹಾಕಿದ ಆರೋಪದಡಿ ಮೊಹಮ್ಮದ್ ಹುಸೇನ್ ವಿರುದ್ಧ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ನಿನ್ನೆ ಸಂಜೆ 7 ಗಂಟೆಯ ಸುಮಾರಿಗೆ ಬೊಮ್ಮನಹಳ್ಳಿಯ ಬೇಗೂರು ರಸ್ತೆಯಲ್ಲಿರುವ ಮನೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲು ಪೊಲೀಸ್ ಸಿಬ್ಬಂದಿ ತೆರಳಿದ್ದಾಗ ಘಟನೆ ನಡೆದಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT