ಸಂಗ್ರಹ ಚಿತ್ರ 
ರಾಜ್ಯ

ಹೊಸಪೇಟೆ: ಹಂಪಿಯಲ್ಲಿ ಜಿ-20 ಶೃಂಗಸಭೆಗೆ ಸಿದ್ಧತೆ ಆರಂಭ

ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜುಲೈ 10-12ರವರೆಗೆ ನಡೆಯಲಿರುವ ಜಿ.20 ಶೃಂಗಸಭೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ವಿಜಯನಗರ ಜಿಲ್ಲಾಡಳಿತದ ವತಿಯಿಂದ ಸಿದ್ಧತೆ ಆರಂಭಗೊಂಡಿದೆ.

ಹೊಸಪೇಟೆ: ವಿಶ್ವ ಪಾರಂಪರಿಕ ತಾಣ ಹಂಪಿಯಲ್ಲಿ ಜುಲೈ 10-12ರವರೆಗೆ ನಡೆಯಲಿರುವ ಜಿ.20 ಶೃಂಗಸಭೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ವಿಜಯನಗರ ಜಿಲ್ಲಾಡಳಿತದ ವತಿಯಿಂದ ಸಿದ್ಧತೆ ಆರಂಭಗೊಂಡಿದೆ.

ಕಳೆದ ಎರಡು ತಿಂಗಳಲ್ಲಿ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಹಂಪಿಗೆ ಎರಡು ಬಾರಿ ಭೇಟಿ ನೀಡಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಮತ್ತೊಮ್ಮೆ ಸಭೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ವ್ಯವಸ್ಥೆಗಳ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ವಿಜಯನಗರ ಆಡಳಿತ ಮಂಡಳಿಗೆ ಸಲಹೆಗಳನ್ನು ನೀಡುತ್ತಿದ್ದು, ಇದರಂತೆ ಪಾರ್ಕಿಂಗ್ ಸ್ಲಾಟ್‌ಗಳನ್ನು ರಚನೆ, ಭದ್ರತೆ ಕಾರ್ಯ, ವಸತಿ ಸೌಕರ್ಯಗಳ ಹೆಚ್ಚುವುದು ಸೇರಿದಂತೆ ಇತರೆ ವ್ಯವಸ್ಥೆಗಳ ಕಲ್ಪಿಸುವ ಕುರಿತು ಪೂರ್ವಸಿದ್ಧತಾ ಕಾರ್ಯಗಳ ಕೈಗೊಳ್ಳಲಾಗುತ್ತಿದೆ.

ವಿಜಯನಗರ ಜಿಲ್ಲಾಧಿಕಾರಿ ವೆಂಕಟೇಶ್ ಟಿ ಅವರು ಮಾತನಾಡಿ, ಪಾರಂಪರಿಕ ಪ್ರದೇಶ ಹಂಪಿಯಲ್ಲಿಯೇ ಸಭೆ ನಡೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರು ಮತ್ತು ಮೈಸೂರು ನಂತರ ಹಂಪಿ ಶೃಂಗಸಭೆಯ ಆತಿಥ್ಯ ವಹಿಸುತ್ತಿದೆ. ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಹಂಪಿಗೆ ಎರಡು ಬಾರಿ ಭೇಟಿ ನೀಡಿದ್ದಾರೆ. ಮತ್ತೊಮ್ಮೆ ಹಂಪಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆಂದು ಹೇಳಿದ್ದಾರೆ. ಜಿ20 ರಾಷ್ಟ್ರಗಳ 200ಕ್ಕೂ ಹೆಚ್ಚು ಪ್ರತಿನಿಧಿಗಳು ಹಂಪಿಗೆ ಭೇಟಿ ನೀಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ: ಇರಾನ್ ಪ್ರಮುಖ ಸೇತುವೆ ಧ್ವಂಸ, ತಡವಾಗುವ ಮುನ್ನ ಶಾಂತಿ ಒಪ್ಪಂದಕ್ಕೆ ಬನ್ನಿ; ಟೆಹ್ರಾನ್'ಗೆ ಟ್ರಂಪ್ ಎಚ್ಚರಿಕೆ

"ದಿನಕ್ಕೊಂದು, ಕ್ಷಣಕ್ಕೊಂದು ಮಾತನಾಡಬೇಡಿ": ಇರಾನ್ ಯುದ್ಧದ ಬಗ್ಗೆ ಟ್ರಂಪ್​ಗೆ ಮ್ಯಾಕ್ರನ್ ಮಂಗಳಾರತಿ!

ಹಾರ್ಮುಜ್ ಜಲಸಂಧಿ ಕುರಿತು ಬ್ರಿಟನ್ ನೇತೃತ್ವದಲ್ಲಿ ಮಾತುಕತೆ; ಭಾರತ ಭಾಗಿ: ತೈಲ ಬಿಕ್ಕಟ್ಟಿಗೆ ಬ್ರೇಕ್?

IPL 2026: ಅಭಿಷೇಕ್, ಕ್ಲಾಸೆನ್ ಸ್ಫೋಟಕ ಬ್ಯಾಟಿಂಗ್; KKR ವಿರುದ್ಧ SRH ಭರ್ಜರಿ ಗೆಲುವು

ಪಶ್ಚಿಮ ಏಷ್ಯಾ ಯುದ್ಧದ ಪರಿಸ್ಥಿತಿ ನಿರ್ವಹಣೆ: ಮೋದಿ ಸರ್ಕಾರವನ್ನು ಹಾಡಿ ಹೊಗಳಿದ ಕಾಂಗ್ರೆಸ್ ಹಿರಿಯ ನಾಯಕ; ಪಕ್ಷಕ್ಕೆ ತೀವ್ರ ಮುಜುಗರ!

SCROLL FOR NEXT