ಸಾಂದರ್ಭಿಕ ಚಿತ್ರ 
ರಾಜ್ಯ

ವಿಜಯಪುರ: ಬೈಕ್​ಗೆ ಟಿಪ್ಪರ್ ಡಿಕ್ಕಿ, ಸ್ಥಳದಲ್ಲೇ ಅತ್ತೆ, ಅಳಿಯ ಸಾವು

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದ ತಂಗಡಗಿ ಬಳಿ ಗುರುವಾರ ಬೈಕ್​ಗೆ ಟಿಪ್ಪರ್​ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಅತ್ತೆ ಹಾಗೂ ಅಳಿಯ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದ ತಂಗಡಗಿ ಬಳಿ ಗುರುವಾರ ಬೈಕ್​ಗೆ ಟಿಪ್ಪರ್​ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಅತ್ತೆ ಹಾಗೂ ಅಳಿಯ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಮುದ್ನಾಳ ಗ್ರಾಮದ ಶರಣಮ್ಮ ಕಂಬಳಿ ಹಾಗೂ ನಾಗೇಶ್ ಶಿವಪುರ ಎಂದು ಗುರುತಿಸಲಾಗಿದೆ. ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುದ್ದೇಬಿಹಾಳದಿಂದ ಮುದ್ನಾಳ ಗ್ರಾಮಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಟಿಪ್ಪರ್ ವಾಹನ ಸಮೇತ ಚಾಲಕ ಪರಾರಿಯಾಗಿದ್ದು, ಸ್ಥಳೀಯ ನಿವಾಸಿಗಳು ಟಿಪ್ಪರ್ ಬೆನ್ನಟ್ಟಿ ಚಾಲಕನನ್ನು ಹಿಡಿದ್ದಾರೆ. 

ಈ ಸಂಬಂಧ  ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯದುವೀರ್ ಒಡೆಯರ್ ರಿಂದ ಬನ್ನಿ ಮರಕ್ಕೆ ಶಮಿ ಪೂಜೆ: ಅರಮನೆ ದಸರಾ ಮುಕ್ತಾಯ

ಭಾರತದಲ್ಲಿ ಪ್ರತಿ ಗಂಟೆಗೆ ಒಬ್ಬ ರೈತ ಆತ್ಮಹತ್ಯೆ: NCRB ವರದಿ

1st Test: ಇತಿಹಾಸ ಬರೆದ Jasprit Bumrah, ಕನ್ನಡಿಗ Javagal Srinath ಹಳೇ ದಾಖಲೆ ಕೊನೆಗೂ ಪತನ!

1st Test: Siraj, Bumrah ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ West Indies, ಮೊದಲ ಇನ್ನಿಂಗ್ಸ್ 162 ರನ್ ಗೆ ಆಲೌಟ್!

ಸ್ವದೇಶಿ-ಸ್ವಾವಲಂಬನೆಗೆ ಪರ್ಯಾಯವಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

SCROLL FOR NEXT