ಸಂಗ್ರಹ ಚಿತ್ರ 
ರಾಜ್ಯ

ರಾಯಚೂರು: ಕಲುಷಿತ ನೀರು ಸೇವಿಸಿ ಬಾಲಕ ಸಾವು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಕಲುಷಿತ ನೀರು ಸೇವಿಸಿ 5 ವರ್ಷದ ಬಾಲಕ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ರಾಯಚೂರಿನ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ.

ರಾಯಚೂರು: ಕಲುಷಿತ ನೀರು ಸೇವಿಸಿ 5 ವರ್ಷದ ಬಾಲಕ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ರಾಯಚೂರಿನ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ.

ನೀರು ಸರಬರಾಜು ಮಾಡುವ ಪೈಪ್ ಲೈನ್‌ಗೆ ಚರಂಡಿ ನೀರು ಸೇರುತ್ತಿದ್ದು, ಕಳೆದ 2-3 ದಿನಗಳಿಂದ ಜನರು ಅಸ್ವಸ್ಥರಾಗುತ್ತಿದ್ದಾರೆಂದು ತಿಳಿದುಬಂದಿದೆ.

ಇದರಂತೆ ಇಂದು 5 ವರ್ಷದ ಬಾಲಕ ಹನುಮೇಶ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆಂದು ವರದಿಗಳು ತಿಳಿಸಿವೆ.

ಕಲುಷಿತ ನೀರು ಸೇವನೆಯಿಂದಾಗಿ ಮಕ್ಕಳು, ಮಹಿಳೆಯರು ಸೇರಿ 30 ಕ್ಕೂ ಹೆಚ್ಚು ಜನ ವಾಂತಿ ಭೇದಿಯಿಂದ ರಾಯಚೂರಿನ ರಿಮ್ಸ್, ಅರಕೇರಾ, ದೇವದುರ್ಗದ ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.

ಈ ನಡುವೆ ಸುದ್ದಿ ತಿಳಿಯುತ್ತಿದ್ದಂತಯೇ ಗ್ರಾಮಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುರೇಂದ್ರ ಬಾಬು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

ಗ್ರಾಮದಲ್ಲಿ ವೈದ್ಯರ ತಂಡ ಬೀಡು ಬಿಟ್ಟಿದ್ದು ಅಗತ್ಯ ವೈದ್ಯಕೀಯ ಸಲಕರಣೆ, ಔಷಧಿ ವ್ಯವಸ್ಥೆಗಳನ್ನು ಮಾಡುತ್ತಿದ್ದಾರಂದು ವರದಿಗಳು ತಿಳಿಸಿವೆ,

ಸದ್ಯ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಪರ್ಯಾಯ ವ್ಯವಸ್ಥೆ ಮಾಡಲಾಗಿದ್ದು,  ಗ್ರಾಮದ ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT