ಪ್ರಾತಿನಿಧಿಕ ಚಿತ್ರ 
ರಾಜ್ಯ

ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ 30 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ರಾಯಚೂರು: ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಅಸ್ವಸ್ಥರನ್ನು ರಾಯಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆ (RIMS) ಮತ್ತು ಅರಕೇರಾ ಮತ್ತು ದೇವದುರ್ಗದ ಇತರ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.

ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರು ಆರೋಪಿಸಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಪೊಲೀಸರು ಕೂಡ ಗ್ರಾಮಕ್ಕೆ ಭೇಟಿ ನೀಡಿದ್ದು, ಅಧಿಕಾರಿಗಳು ಕುಡಿಯುವ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಕುಡಿಯುವ ನೀರಿಗೆ ತ್ಯಾಜ್ಯ ನೀರು ಸೇರಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನಿಖರ ಕಾರಣ ತಿಳಿಯಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

2022ರ ಜೂನ್‌ನಲ್ಲಿ ರಾಯಚೂರು ಪಟ್ಟಣದಲ್ಲಿ ಕಲುಷಿತ ನೀರು ಸೇವಿಸಿದ ಪ್ರಕರಣದಲ್ಲಿ ಮೂವರು ಸಾವಿಗೀಡಾಗಿದ್ದರು ಮತ್ತು 23 ಮಕ್ಕಳು ಸೇರಿದಂತೆ 60ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದರು. ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಲುಷಿತ ನೀರು ಸೇವಿಸಿ ಮೃತಪಟ್ಟ ಮೂವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದರು. 

ರಾಯಚೂರು ಜಿಲ್ಲೆ ರಾಜ್ಯದ ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಹತ್ವದ ಆದೇಶ: ಅಗತ್ಯವಿದ್ದರೆ ಆಕ್ರಮಣಕಾರಿ ಬೀದಿ ನಾಯಿಗಳನ್ನು ಕೊಲ್ಲಲು ಸುಪ್ರೀಂ ಕೋರ್ಟ್ ಅನುಮತಿ!

Ebola outbreak: ಮಾರಣಾಂತಿಕ ಎಬೋಲಾಗೆ 131 ಸಾವು, 500ಕ್ಕೂ ಹೆಚ್ಚು ಶಂಕಿತ ಕೇಸ್; ವಿಶ್ವಸಂಸ್ಥೆಯಿಂದ ತುರ್ತು ಪರಿಸ್ಥಿತಿ ಘೋಷಣೆ!

ದೇವಾಲಯಗಳ ಚಿನ್ನದ ಮೇಲೆ ಪ್ರಧಾನಿ ಮೋದಿ ಕಣ್ಣು?: ಕೇಂದ್ರ ಸರ್ಕಾರ ಹೇಳಿದ್ದೇನು?

ಮುಂದೆ ತುಂಬಾ ಕಠಿಣಾತಿಕಠಿಣ ದಿನಗಳು ಬರಲಿವೆ: ರಾಹುಲ್ ಗಾಂಧಿ ಎಚ್ಚರಿಕೆ

ಸಾರಿಗೆ ಸಂಘಟನೆಗಳಿಗೆ ಹೈಕೋರ್ಟ್ ಬ್ರೇಕ್: ಮೇ 20 ರಿಂದ ಮುಷ್ಕರ ನಡೆಸದಂತೆ ನಿರ್ಬಂಧ

SCROLL FOR NEXT