ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ಬೈರತಿ ಸುರೇಶ್, ಎಂಬಿ ಪಾಟೀಲ್, ಜಮೀರ್ ಅಹಮದ್ ಇದ್ದಾರೆ. 
ರಾಜ್ಯ

ಸಚಿವ ಸಂಪುಟ ವಿಸ್ತರಣೆ ಕಸರತ್ತು: ಪ್ರಿಯಾಂಕಾ ಗಾಂಧಿ ವಾದ್ರಾರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾದರು. ಸಿಎಂ ಜೊತೆ ರಾಜ್ಯ ಸಚಿವ ಬಿಝಡ್ ಜಮೀರ್ ಅಹಮದ್ ಖಾನ್, ಶಾಸಕ ಬೈರತಿ ಸುರೇಶ್ ಇದ್ದರು.

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿಯಾದರು.

ಸಿಎಂ ಜೊತೆ ರಾಜ್ಯ ಸಚಿವ ಬಿಝಡ್ ಜಮೀರ್ ಅಹಮದ್ ಖಾನ್, ಶಾಸಕ ಬೈರತಿ ಸುರೇಶ್ ಇದ್ದರು.

ನವದೆಹಲಿಯಲ್ಲಿ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಬರ್ಟ್ ವಾದ್ರಾ ಅವರನ್ನು ಭೇಟಿ ಮಾಡಲಾಯಿತು. ಈ ವೇಳೆ ಸಚಿವರಾದ ಜಮೀರ್ ಅಹಮದ್ ಖಾನ್, ಶಾಸಕರಾದ ಬೈರತಿ ಸುರೇಶ್ ಇದ್ದರು ಎಂದು ಸಚಿವ ಎಂಟಿ ಪಾಟೀಲ್ ಟ್ವೀಟ್ ಮಾಡಿದ್ದಾರೆ. 

ಮೇ 24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ಆಗಮಿಸಿ ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ಉನ್ನತ ನಾಯಕರೊಂದಿಗೆ ಚರ್ಚಿಸಿದ್ದರು.

ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದ ಚರ್ಚೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಮುಖ್ಯಸ್ಥ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಮತ್ತು ಎಐಸಿಸಿ ಈ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.

ಎಎನ್‌ಐ ಜೊತೆ ಮಾತನಾಡಿದ ಅವರು, ಆ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಎಐಸಿಸಿ ತಿಳಿಸಲಿದ್ದು, ಪಕ್ಷದ ಅಧ್ಯಕ್ಷನಾಗಿ ನಾನು ಖಂಡಿತವಾಗಿಯೂ ದೆಹಲಿಗೆ ಹೋಗುತ್ತೇನೆ ಎಂದು ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಹಲವು ನಂತರ, ಕಾಂಗ್ರೆಸ್ ತನ್ನ ಸಿಎಂ ಅಭ್ಯರ್ಥಿಯನ್ನು ಅಂತಿಮಗೊಳಿಸಿಕು. ಕರ್ನಾಟಕದಲ್ಲಿ ಸಿಎಲ್‌ಪಿ ನಾಯಕರಾಗಿ ಸಿಎಂ ಸಿದ್ದರಾಮಯ್ಯ ಅವಿರೋಧವಾಗಿ ಆಯ್ಕೆಯಾದರು. 

ಮೇ 20 ರಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗಳಿಸಿ ಆಡಳಿತಾರೂಢ ಬಿಜೆಪಿಯನ್ನು ಅಧಿಕಾರದಿಂದ ಹೊರಹಾಕಿತು. ಬಿಜೆಪಿ ಕೇವಲ 66 ಸ್ಥಾನಗಳನ್ನು ಗಳಿಸಿ ವಿರೋಧ ಪಕ್ಷದ ಸ್ಥಾನ ಪಡೆದುಕೊಂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!