ಉಪನಗರ ರೈಲು ಯೋಜನೆ. 
ರಾಜ್ಯ

ಬೆಂಗಳೂರು ಉಪನಗರ ರೈಲು ಯೋಜನೆ: 12 ನಿಲ್ದಾಣಗಳ ನಿರ್ಮಾಣಕ್ಕೆ ಟೆಂಡರ್'ಗೆ ಆಹ್ವಾನ

ಬೆಂಗಳೂರು ಉಪನಗರ ರೈಲು ಯೋಜನೆಯನ್ನು (ಬಿಎಸ್‌ಆರ್‌ಪಿ) ಅನುಷ್ಠಾನಗೊಳಿಸುವ ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ಮಲ್ಲಿಗೆ ಕಾರಿಡಾರ್‌ನಲ್ಲಿ (ಬೈಯಪ್ಪನಹಳ್ಳಿ– ಚಿಕ್ಕಬಾಣಾವರ) 12 ನಿಲ್ದಾಣಗಳ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಿದೆ.

ಬೆಂಗಳೂರು: ಬೆಂಗಳೂರು ಉಪನಗರ ರೈಲು ಯೋಜನೆಯನ್ನು (ಬಿಎಸ್‌ಆರ್‌ಪಿ) ಅನುಷ್ಠಾನಗೊಳಿಸುವ ಕರ್ನಾಟಕ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ಮಲ್ಲಿಗೆ ಕಾರಿಡಾರ್‌ನಲ್ಲಿ (ಬೈಯಪ್ಪನಹಳ್ಳಿ– ಚಿಕ್ಕಬಾಣಾವರ) 12 ನಿಲ್ದಾಣಗಳ ನಿರ್ಮಾಣಕ್ಕೆ ಟೆಂಡರ್ ಆಹ್ವಾನಿಸಿದೆ.

ರೈಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಕಂಪನಿ (ಕರ್ನಾಟಕ) ಲಿಮಿಟೆಡ್‌ನ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಬೆನ್ನಿಗಾನಹಳ್ಳಿ, ಕಸ್ತೂರಿ ನಗರ, ಸೇವಾ ನಗರ, ಬಾಣಸವಾಡಿ, ನಾಗವಾರ, ಕನಕನಗರ, ಹೆಬ್ಬಾಳ, ಮತ್ತಿಕೆರೆ, ಯಶವಂತಪುರ, ಶೆಟ್ಟಿಹಳ್ಳಿ, ಮೈದರಹಳ್ಳಿ, ಚಿಕ್ಕಬಾಣಾವರ ನಿಲ್ದಾಣಗಳ ವಿನ್ಯಾಸ ಅಂತಿಮಗೊಳಿಸಲಾಗಿದೆ ಎಂದು ತಿಳಿಸಿದೆ.

12 ನಿಲ್ದಾಣಗಳಲ್ಲಿ ಎರಡು ಎತ್ತರಿಸಿದ ನಿಲ್ದಾಣಗಳು, ಎರಡು ಎತ್ತರಿಸಿದ ಇಂಟರ್ ಚೇಂಜ್ ನಿಲ್ದಾಣಗಳು, ಎಂಟು ನೆಲಸ್ತರದ ನಿಲ್ದಾಣಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ.

ಎತ್ತರಿಸಿದ ಪಾದಚಾರಿ ಉಕ್ಕಿನ ಮಾರ್ಗ, ಮೇಲ್ಚಾವಣಿಗಳ ರಚನೆ, ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ನಿರ್ಮಿಸಲು ಉದ್ದೇಶಿಸಿದೆ. ಬಿಡ್‌ ಸಲ್ಲಿಸಲು ಆಗಸ್ಟ್‌ 8 ಕೊನೆಯ ದಿನಾವಾಗಿದೆ ಎಂದು ಕೆ–ರೈಡ್ ವಿವರಿಸಿದೆ.

ಬೆಂಗಳೂರಿನಲ್ಲಿ ಉಪನಗರ ರೈಲು ಯೋಜನೆಯಡಿ ನಾಲ್ಕು ಕಾರಿಡಾರ್‌ಗಳು ನಿರ್ಮಾಣವಾಗುತ್ತಿವೆ. ಮೊದಲ ಹಂತದಲ್ಲಿ ಮಲ್ಲಿಗೆ ಕಾರಿಡಾರ್‌ನಲ್ಲಿ ಕಾಮಗಾರಿ ಆರಂಭವಾಗಿದೆ. ಬಾಕಿ ಮೂರು ಕಾರಿಡಾರ್‌ನಲ್ಲಿ ಕಾಮಗಾರಿ ಇನ್ನೂ ಆರಂಭವಾಗಿಲ್ಲ.

ಕೆಎಸ್‌ಆರ್‌ ರೈಲು ನಿಲ್ದಾಣದಿಂದ ದೇವನಹಳ್ಳಿಗೆ ಸಂಪರ್ಕ ಕಲ್ಪಿಸುವ ಸಂಪಿಗೆ (ಕಾರಿಡಾರ್‌–1) ಕಾರಿಡಾರ್‌ಗೆ ಮೊದಲ ಆದ್ಯತೆ ನೀಡಬೇಕು ಎಂಬ ಒತ್ತಡ ಇತ್ತು. ಆದರೂ, ಕಾರಿಡಾರ್–2 ಕಾಮಗಾರಿ ಆರಂಭಿಸಲು ಕೆ–ರೈಡ್ ಉತ್ಸುಕತೆ ತೋರಿಸಿದೆ.

ಗುತ್ತಿಗೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 8 ಕೊನೆಯ ದಿನವಾಗಿದ್ದು, ಅಂದು ಮಧ್ಯಾಹ್ನ 3 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳು http://eproc.karnataka.gov.in ಅಥವಾ www.kride.in ನಲ್ಲಿ ಲಭ್ಯವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT